ಜೆಡಿಎಸ್ ನಾಯಕನ ವಿರುದ್ಧ ಸಿದ್ದರಾಮಯ್ಯ ಗರಂ

By Web DeskFirst Published May 13, 2019, 7:51 AM IST
Highlights

ರಾಜ್ಯ ರಾಜಕೀಯದಲ್ಲೀಗ ಹಲವು ಬೆಳವಣಿಗೆಗಳಾಗುತ್ತಿವೆ. ಮೈತ್ರಿ ಮುಖಂಡರಲ್ಲೇ ಅಸಮಾಧಾನವೊಂದು ಕಂಡು ಬರುತ್ತಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇದೀಗ ಜೆಡಿಎಸ್ ಮುಖಂಡರೋರ್ವರ ವಿರುದ್ಧ ಗರಂ ಆಗಿದ್ದಾರೆ. 

ಕಲಬುರಗಿ: ಮುಖ್ಯಮಂತ್ರಿಯಾಗಿ ತಮ್ಮ ಸಾಧನೆಯೇನೆಂದು ಪ್ರಶ್ನಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.  ವಿಶ್ವನಾಥ್ ವಿರುದ್ಧ ಸಿದ್ದರಾಮಯ್ಯ ತೀವ್ರ ಗರಂ ಆಗಿದ್ದಾರೆ.

ವಿಶ್ವನಾಥ್ ಹೊಟ್ಟೆಕಿಚ್ಚಿ ನಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುತ್ತೇನೆ ಎಂದು ಕಿಡಿಕಾರಿದ್ದಾರೆ. ವಿಶ್ವನಾಥ್ ಹೇಳಿಕೆಗೆ ಸಂಬಂಧಿಸಿ ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಂಥ ಹೇಳಿಕೆಗಳ ಕುರಿತು ಬಹಿರಂಗವಾಗಿ ಚರ್ಚೆ ಮಾಡುವುದು ಸರಿಯಲ್ಲ ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲೇ ಮಾತಾನಾಡುತ್ತೇನೆ ಎಂದರು. 

ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾಕೆ 78 ಸ್ಥಾನಕ್ಕೆ ಕುಸಿಯಿತು ಎಂಬ ವಿಶ್ವನಾಥ್ ಹೇಳಿಕೆಗೂ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿ, ಅವರ ಮಾತಿಗೆ  ಯಾರೂ ಜಾಸ್ತಿ ಕಿಮ್ಮತ್ತು ಕೊಡ ಬೇಡಿ ಎಂದರು. ಜತೆಗೆ, ಎಸ್. ಎಂ.ಕೃಷ್ಣ ಸರ್ಕಾರದಲ್ಲಿ ಇದೇ ವಿಶ್ವನಾಥ್ ಮಂತ್ರಿಯಾಗಿದ್ದರು. ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ೬೫ ಸ್ಥಾನ ಬಂದಿತ್ತಲ್ವಾ ಎಂದು ಕಾಲೆಳೆದರು ಮಾಜಿ ಸಿಎಂ ಸಿದ್ದರಾಮಯ್ಯ.

click me!