ಆಪ್ತರಿಂದಲೇ ಬೆನ್ನಿಗೆ ಚೂರಿ : ಸಿದ್ದರಾಮಯ್ಯ ಅಳಲು

Published : Jul 22, 2019, 09:37 AM IST
ಆಪ್ತರಿಂದಲೇ ಬೆನ್ನಿಗೆ ಚೂರಿ : ಸಿದ್ದರಾಮಯ್ಯ ಅಳಲು

ಸಾರಾಂಶ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇದೀಗ ತಮ್ಮ ಪಕ್ಷದದವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಂಬಿದವರೇ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದಿದ್ದಾರೆ. 

ಬೆಂಗಳೂರು [ಜು.22] :  ತಾವು ಮುಖ್ಯಮಂತ್ರಿ ಆಗಿದ್ದಾಗ ತಮ್ಮ ಬಳಿ ಕೆಲಸ ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಸಭೆಯಲ್ಲಿ ನೋವು ತೋಡಿಕೊಂಡರು ಎಂದು ತಿಳಿದುಬಂದಿದೆ.

ತಮ್ಮ ಆಪ್ತರೇ ಹೋಗಿರುವುದರಿಂದ ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಅಪ ಪ್ರಚಾರ ಮಾಡಲಾಗುತ್ತಿದೆ. ಹೋದವರಷ್ಟೇ ಅಲ್ಲ, ಇಲ್ಲಿರುವವರೂ ತಮಗೆ ಆಪ್ತರು. ನಿಮ್ಮಲ್ಲಿ ಯಾರಿಗಾದರೂ ಬಿಜೆಪಿಗೆ ಹೋಗುವಂತೆ ಹೇಳಿದ್ದೇನೆಯೇ ಎಂದು ಪ್ರಶ್ನಿಸಿದ ಅವರು ಅಂತಹ ನೀಚ ಕೆಲಸ ನಾನು ಮಾಡುವುದಿಲ್ಲ. 

ತಮ್ಮ ಬಳಿ ಗಂಟೆಗಟ್ಟಲೇ ಕುಳಿತು ನಾವೆಲ್ಲೂ ಹೋಗುವುದಿಲ್ಲ ಎಂದವರು ಇದೀಗ ದೂರವಾಣಿ ಕರೆಯನ್ನೂ ಸ್ವೀಕರಿಸುತ್ತಿಲ್ಲ ಎಂದು ಬೈರತಿ ಬಸವರಾಜು, ಮುನಿರತ್ನ, ಎಸ್‌.ಟಿ. ಸೋಮೇಶೇಖರ್‌ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ
Viral Video: ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌