
ಬೆಂಗಳೂರು: ಗ್ರಾಮೀಣ ಕರಕುಶಲ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಪತ್ರ ಬರೆದಿದ್ದಾರೆ.
ಗ್ರಾಮೀಣ ಕರಕುಶಲ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವುದರಿಂದ ಕಲಾವಿದರು ಹಾಗೂ ಉತ್ಪನ್ನ ತಯಾರಿಸುವವರ ಜೀವನಾಧಾರದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕರಕುಶಲ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವುದರಿಂದ ಕಲಾವಿದರು ಹಾಗೂ ಲಕ್ಷಾಂತರ ಕುಟುಂಬಗಳನ್ನು ಸಂಕಷ್ಟಕ್ಕೀಡುಮಾಡಿದೆ. ಇದರ ವಿರುದ್ಧ ರಂಗಕರ್ಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಅವರು ಬೆಂಗಳೂರಿನಲ್ಲಿ ಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ, ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ತುರ್ತು ಕ್ರಮದ ಅಗತ್ಯವಿದೆ ಎಂದಿರುವ ಮುಖ್ಯಮಂತ್ರಿ, ಮುಂದಿನ ಜಿಎಸ್ಟಿ ಸಭೆಯಲ್ಲಿ ಆದ್ಯತೆಯ ಮೇರೆಗೆ ಚರ್ಚಿಸಿ ಸಕಾರಾತ್ಮ ನಿರ್ಧಾರ ಕೈಗೊಳ್ಳುವ ಅಗತ್ಯವಿದೆಯೆಂದು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.