ಗೋವಾ ಕಾಂಗ್ರೆಸಿಗರಿಗೂ ನಮಗೂ ಏನು ಸಂಬಂಧ ? ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ

Published : Dec 23, 2017, 02:58 PM ISTUpdated : Apr 11, 2018, 12:42 PM IST
ಗೋವಾ ಕಾಂಗ್ರೆಸಿಗರಿಗೂ ನಮಗೂ ಏನು ಸಂಬಂಧ ? ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ

ಸಾರಾಂಶ

 ಗೋವಾ ಸರ್ಕಾರವನ್ನು ತಾವು ಒಪ್ಪಿಸುವುದಾಗಿ ಬಿಜೆಪಿಯವರೇ ಹೇಳಿದ್ದರಿಂದ ಅವರನ್ನು ಕೇಳುತ್ತಿದ್ದೇವೆ.

ಯಾದಗಿರಿ(ಡಿ.23): ಮಹಾದಾಯಿ ವಿವಾದ ಇತ್ಯರ್ಥವಾಗಲು ಪ್ರಧಾನಿಯವರೇ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿದ ಸಿಎಂ ಸಿದ್ದರಾಮಯ್ಯ, ಗೋವಾ ಕಾಂಗ್ರೆಸ್ಸಿಗರಿಗೂ ನಮಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ಯಾದಗಿರಿಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಗೋವಾ ಸರ್ಕಾರವನ್ನು ತಾವು ಒಪ್ಪಿಸುವುದಾಗಿ ಬಿಜೆಪಿಯವರೇ ಹೇಳಿದ್ದರಿಂದ ಅವರನ್ನು ಕೇಳುತ್ತಿದ್ದೇವೆ. ಒಂದು ವರ್ಷದಿಂದ ಸುಮ್ಮನಿದ್ದ ಬಿಜೆಪಿಯವರು ಈಗ ಪರಿವರ್ತನಾ ಯಾತ್ರೆಗೆ ಬರುವಾಗ ನೆನಪಾಗಿದೆ. ತಿಂಗಳೊಳಗಾಗಿ ನೀರು ಬಿಡಿಸುತ್ತೇನೆಂದು ಯಡಿಯೂರಪ್ಪ ಸುಳ್ಳು ಭರವಸೆ ನೀಡಿ ಸಿಕ್ಕಿಹಾಕಿಕೊಂಡಿದ್ದಾರೆ. ಅದಕ್ಕಾಗಿ ಬಿಜೆಪಿ ಕಚೇರಿ ಎದುರು ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ರೈತರೇನು ನಾವು ಹೇಳಿದಂತೆ ಕೇಳುತ್ತಾರೆಯೇ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ, ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ
ಬೈಕ್ ರೈಡಿಂಗ್‌ನಲ್ಲಿರುವ ಗಂಡನ ಮೇಲೆ ಆಕ್ರೋಶ ತೀರಿಸಿಕೊಂಡ ಹೆಂಡತಿ, ವಿಡಿಯೋ ವೈರಲ್