
ಬಾದಾಮಿ: ಮಾಜಿ ಸಿಎಂ ಹಾಗೂ ಹಾಲಿ ಬಾದಾಮಿ ಶಾಸಕರಾಗಿರುವ ಸಿದ್ದರಾಮಯ್ಯ ಗುರುವಾರ ಸ್ವಕ್ಷೇತ್ರಕ್ಕೆ ನೀಡಿದ್ದು, ಅವರ ಮೊದಲ ಭೇಟಿಗೆ ಅಸಮಾಧಾನದ ಬಿಸಿ ತಟ್ಟಿದೆ.
ಸಿದ್ಧರಾಮಯ್ಯ ಮೇಲೆ ಎಸ್.ಆರ್.ಪಾಟೀಲ್ ಮುನಿಸಿಕೊಂಡಿದ್ದಾರಾ ಎಂಬ ಪ್ರಶ್ನೆಗಳು ಎದ್ದಿವೆ. ಗುರುವಾರ ಬಾದಾಮಿಗೆ ಸಿದ್ಧರಾಮಯ್ಯ ಆಗಮಿಸಿದ್ದು, ಚುನಾವಣೆಯಲ್ಲಿ ಅವರ ಗೆಲುವಿನ ರುವಾರಿಯಾಗಿದ್ದ ಎಸ್.ಆರ್ ಪಾಟೀಲ್ ದೂರನೇ ಉಳಿದಿದ್ದಾರೆ.
ಗೆಲ್ಲಿಸಿಕೊಂಡು ಬರ್ತೇವೆ ಎಂದು ಸಿದ್ದರಾಮಯ್ಯರನ್ನು ಬಾದಾಮಿಗೆ ಕರೆತಂದಿದ್ದ ಎಸ್. ಆರ್.ಪಾಟೀಲ್, ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಜಿಲ್ಲೆಗೆ ಸಿದ್ದರಾಮಯ್ಯ ಬಂದ್ರೂ ಅವರ ಜೊತೆಗೆ ಬಾರದ ಎಸ್.ಆರ್.ಪಾಟೀಲರ ನಡೆ ಅವರೊಳಗಿರುವ ಅಸಮಾಧಾನವನ್ನು ಬಹಿರಂಗಪಡಿಸಿದೆ.
ಎಸ್.ಆರ್.ಪಾಟೀಲ್ ಈಗಾಗಲೇ ಕೆಪಿಸಿಸಿ ಕಾಯಾ೯ಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಬಾದಾಮಿಗೆ ಆಗಮಿಸಿದ ಸಿದ್ದರಾಮಯ್ಯ ಬನಶಂಕರಿ ದೇವಿ ಆಶಿವಾ೯ದ ಪಡೆದಿದ್ದಾರೆ. ಶಾಸಕರಾಗಿ ಆಯ್ಕೆ ಆದ ಮೇಲೆ ಇದೆ ಮೊದಲ ಬಾರಿ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿರುವ ಸಿದ್ದರಾಮಯ್ಯ. ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಹಾಗೂ ವೈಯಕ್ತಿಕ 1 ಲಕ್ಷ ಪರಿಹಾರ ಚೆಕ್ ನೀಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆಯ ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಜೆಡಿಎಸ್ನ ಜಿ.ಟಿ. ದೇವೇಗೌಡ ಮುಂದೆ ಪರಾಭವಗೊಂಡರೆ, ಬಾದಮಿಯಲ್ಲಿ ಬಿಜೆಪಿಯ ಶ್ರೀರಾಮುಲುರನ್ನು ಸೋಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.