ಮೊದಲ ಬಾದಾಮಿ ಭೇಟಿಯಲ್ಲೇ ಸಿದ್ದರಾಮಯ್ಯಗೆ ತಟ್ಟಿದ ಅಸಮಾಧಾನದ ಬಿಸಿ

Published : Jun 07, 2018, 04:49 PM ISTUpdated : Jun 07, 2018, 04:50 PM IST
ಮೊದಲ ಬಾದಾಮಿ ಭೇಟಿಯಲ್ಲೇ ಸಿದ್ದರಾಮಯ್ಯಗೆ ತಟ್ಟಿದ ಅಸಮಾಧಾನದ ಬಿಸಿ

ಸಾರಾಂಶ

ಬಾದಾಮಿಯಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಜಿ ಸಿಎಂ  ಸಿದ್ದರಾಮಯ್ಯರಿಂದ ದೂರ ಉಳಿದ ಅವರ ಆಪ್ತ ಮತ್ತು ಗೆಲುವಿನ ರೂವಾರಿ ಎಸ್‌.ಆರ್‌.ಪಾಟೀಲ್ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ್ದಕ್ಕೆ ಅಸಮಾಧಾನಗೊಂಡಿದ್ದಾರಾ ಎಸ್‌.ಆರ್‌. ಪಾಟೀಲ್?

ಬಾದಾಮಿ: ಮಾಜಿ ಸಿಎಂ ಹಾಗೂ ಹಾಲಿ ಬಾದಾಮಿ ಶಾಸಕರಾಗಿರುವ ಸಿದ್ದರಾಮಯ್ಯ ಗುರುವಾರ ಸ್ವಕ್ಷೇತ್ರಕ್ಕೆ ನೀಡಿದ್ದು, ಅವರ ಮೊದಲ ಭೇಟಿಗೆ ಅಸಮಾಧಾನದ ಬಿಸಿ ತಟ್ಟಿದೆ.    

ಸಿದ್ಧರಾಮಯ್ಯ ಮೇಲೆ ಎಸ್.ಆರ್.ಪಾಟೀಲ್‌ ಮುನಿಸಿಕೊಂಡಿದ್ದಾರಾ ಎಂಬ ಪ್ರಶ್ನೆಗಳು ಎದ್ದಿವೆ. ಗುರುವಾರ ಬಾದಾಮಿಗೆ ಸಿದ್ಧರಾಮಯ್ಯ ಆಗಮಿಸಿದ್ದು, ಚುನಾವಣೆಯಲ್ಲಿ ಅವರ ಗೆಲುವಿನ ರುವಾರಿಯಾಗಿದ್ದ ಎಸ್.ಆರ್ ಪಾಟೀಲ್ ದೂರನೇ ಉಳಿದಿದ್ದಾರೆ.

ಗೆಲ್ಲಿಸಿಕೊಂಡು ಬರ್ತೇವೆ ಎಂದು ಸಿದ್ದರಾಮಯ್ಯರನ್ನು ಬಾದಾಮಿಗೆ ಕರೆತಂದಿದ್ದ ಎಸ್. ಆರ್.ಪಾಟೀಲ್, ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ‌ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಜಿಲ್ಲೆಗೆ ಸಿದ್ದರಾಮಯ್ಯ ಬಂದ್ರೂ ಅವರ ಜೊತೆಗೆ ಬಾರದ ಎಸ್.ಆರ್.ಪಾಟೀಲರ ನಡೆ ಅವರೊಳಗಿರುವ ಅಸಮಾಧಾನವನ್ನು ಬಹಿರಂಗಪಡಿಸಿದೆ.

ಎಸ್.ಆರ್.ಪಾಟೀಲ್ ಈಗಾಗಲೇ ಕೆಪಿಸಿಸಿ ಕಾಯಾ೯ಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ಬಾದಾಮಿಗೆ ಆಗಮಿಸಿದ ಸಿದ್ದರಾಮಯ್ಯ ಬನಶಂಕರಿ ದೇವಿ ಆಶಿವಾ೯ದ ಪಡೆದಿದ್ದಾರೆ. ಶಾಸಕರಾಗಿ ಆಯ್ಕೆ ಆದ ಮೇಲೆ‌ ಇದೆ‌ ಮೊದಲ ಬಾರಿ ಬಾದಾಮಿ ಕ್ಷೇತ್ರಕ್ಕೆ‌ ಭೇಟಿ ನೀಡಿರುವ ಸಿದ್ದರಾಮಯ್ಯ. ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಹಾಗೂ ವೈಯಕ್ತಿಕ 1 ಲಕ್ಷ ಪರಿಹಾರ ಚೆಕ್ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆಯ ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ನ ಜಿ.ಟಿ. ದೇವೇಗೌಡ ಮುಂದೆ ಪರಾಭವಗೊಂಡರೆ, ಬಾದಮಿಯಲ್ಲಿ ಬಿಜೆಪಿಯ ಶ್ರೀರಾಮುಲುರನ್ನು ಸೋಲಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಭಾರತ ಭೇಟಿ: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ಮೆಸ್ಸಿ, ಬಂಗಾಳದಲ್ಲಿ ಫ್ಯಾನ್ಸ್ ದಾಂಧಲೆ, ಕ್ಷಮೆಯಾಚಿಸಿದ ಮಮತಾ
ಗೆಲುವಿನ ವಿಶ್ವಾಸದಲ್ಲಿ ಬೆಟ್ , ಚುನಾವಣೆ ಫಲಿತಾಂಶ ಉಲ್ಟಾ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ