ಆಪರೇಶನ್ ಕಮಲಕ್ಕೆ ಅಡ್ಡಿಯಾಗಿ ನಿಂತಿರುವುದು ಒಬ್ಬ ಮಾಜಿ ಸಿಎಂ

Published : Sep 17, 2018, 04:04 PM ISTUpdated : Sep 19, 2018, 09:28 AM IST
ಆಪರೇಶನ್ ಕಮಲಕ್ಕೆ ಅಡ್ಡಿಯಾಗಿ ನಿಂತಿರುವುದು ಒಬ್ಬ ಮಾಜಿ ಸಿಎಂ

ಸಾರಾಂಶ

ಬಿಜೆಪಿಯ ಆಪರೇಶನ್ ಕಲಮಕ್ಕೆ ಕಾಂಗ್ರೆಸ್ಸಿನ ಮಾಜಿ ಸಿಎಂ ಒಬ್ಬರೇ ಅಡ್ಡಿಯಾಗಿ ನಿಂತಿದ್ದಾರೆ. ಹಾಗಾದರೆ ಆ ಮಾಜಿ ಸಿಎಂ ಮಾಡುತ್ತಿರುವ ಚಾಣಕ್ಯ ತಂತ್ರಗಳು ಏನು? ಯಾವ ಕಾರಣಕ್ಕೆ ಸರಕಾರದ ಸುರಕ್ಷತೆಗೆ ಪ್ರಯತ್ನ ಮಾಡ್ತಾ ಇದ್ದಾರೆ?

ಬೆಂಗಳೂರು(ಸೆ.17) ಧರ್ಮಸ್ಥಳದ ಶಾಂತಿವನದಲ್ಲಿ ಕುಳಿತು ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿ ಸರಕಾರದ ವಿರುದ್ಧ ಮಾತನಾಡಿದ್ದಾಗ ಇವರೇ ಮೈತ್ರಿ ಸರಕಾರಕ್ಕೆ ಅಡ್ಡಿಯಾಗಲಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರೆ ಮೈತ್ರಿ ಸರಕಾರಕ್ಕೆ ಕಾವಲಾಗುವ ಲಕ್ಷಣ ಕಂಡುಬರುತ್ತಿದೆ.

ಬಿಜೆಪಿಯ ಆಪರೇಷನ್ ಕಮಲಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರೆ ಅಡ್ಡವಾಗಿ ನಿಂತಿದ್ದಾರಾ? ವಿದೇಶದಿಂದ ಸಿದ್ದು ವಾಪಸಾದ ಮೇಲೆ ಇಂಥದ್ದೊಂದು ಬೆಳವಣಿಗೆ ಕಂಡುಬಂದಿದೆ.

ಕಾಂಗ್ರೆಸ್ ಅತೃಪ್ತರನ್ನು ಸಮಾಧಾನ ಮಾಡುವ ಜವಾಬ್ದಾರಿ ಪಡೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ನಿನ್ನೆಯ ಹಿರಿಯ ನಾಯಕರ ಸಭೆಯ ಬಳಿಕ ಅತೃಪ್ತರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಸಿದ್ಧರಾಮಯ್ಯರ ಸಂಧಾನ ಮಾತುಕತೆಗಳು ಸಫಲವಾದ್ರೆ ಆಪರೇಷನ್ ಕಮಲಕ್ಕೆ ತೊಂದರೆಯಾಗುವುದು ನಿಶ್ಚಿತ. ಇನ್ನೊಂದು ಕಡೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ರಾಜಕೀಯ ನಡೆಯನ್ನು ಗಮನಿಸಿರುವ ಬಿಜೆಪಿ ಸಿದ್ಧರಾಮಯ್ಯರ ಮನವೊಲಿಕೆಗೆ ಅತೃಪ್ತ ಶಾಸಕರು ಸಮಾಧಾನಗೊಂಡರೆ ತಮ್ಮ ಕಾರ್ಯತಂತ್ರಕ್ಕೆ ಅಡ್ಡಿಯಾಗುವುದು ಎಂಬುದನ್ನು ಲೆಕ್ಕ ಹಾಕಿದ್ದಾರೆ.

ವಿದೇಶದಿಂದ ವಾಪಸ್ಸಾಗಿರುವ ಸಿದ್ಧರಾಮಯ್ಯರನ್ನುಅತೃಪ್ತ ಶಾಸಕರು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿಯ ಸಂಪರ್ಕಕ್ಕೆ ಸಿಕ್ಕಿದ್ದ ಶಾಸಕರು ಸಹ ಸಿದ್ಧರಾಮಯ್ಯರನ್ನು ಭೇಟಿಯಾಗುತ್ತಿರುವ ಆತಂಕ ಬಿಜೆಪಿಗೆ ಕಾಡುತ್ತಿದೆ. ಕಾದು ನೋಡಿಕೊಂಡು ಮುಂದಿನ ಹೆಜ್ಜೆ ಇಡಲು ಬಿಜೆಪಿ ಮುಂದಾಗಿದೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್