ರಾಮನಗರ ವರ್ಸಸ್ ಮೈಸೂರು,, ಹೊಸ 'ಕತೆ' ಶುರುವಾಗಿದೆ!

Published : Aug 06, 2018, 04:39 PM ISTUpdated : Aug 06, 2018, 05:44 PM IST
ರಾಮನಗರ ವರ್ಸಸ್ ಮೈಸೂರು,, ಹೊಸ 'ಕತೆ' ಶುರುವಾಗಿದೆ!

ಸಾರಾಂಶ

ಮುಖ್ಯಮಂತ್ರಿ ಎಚ್ ಡಿ.ಕುಮಾರಸ್ವಾಮಿಗೆ ಮಾಜಿ ಸಿಎಂ ಮತ್ತೊಂದು ಪತ್ರ ಬರೆದಿದ್ದಾರೆ. ಬಜೆಟ್ ಗೂ ಮುನ್ನ ಮತ್ತು ಬಜೆಟ್ ನಂತರವೂ ಈ ಪತ್ರ ಸಮರ ಮುಂದುವರಿದುಕೊಂಡೇ ಬಂದಿದೆ. ಹಾಗಾದರೆ ಈ ಬಾರಿ ಯಾವ ಕಾರಣಕ್ಕೆ ಪತ್ರ ಬರೆದಿದ್ದಾರೆ. ಇಲ್ಲಿದೆ ವಿವರ

ಬೆಂಗಳೂರು(ಆ.6) ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಚಿತ್ರನಗರಿಯನ್ನು ಮೈಸೂರಿನಲ್ಲೇ ಸ್ಥಾಪನೆ ಮಾಡಲು ಆಗ್ರಹಿಸಿದ್ದಾರೆ.

ಬಜೆಟ್ ನಲ್ಲಿ ಘೋಷಿಸಿರುವ ಚಿತ್ರನಗರಿ ಸ್ಥಳಾಂತರವನ್ನು ಮರುಪರಿಶೀಲಿಸಲು ಆಗ್ರಹಪಡಿಸಿರುವ ಸಿದ್ದರಾಮಯ್ಯ ಮೈಸೂರಿನಲ್ಲಿ ಎಲ್ಲಾ ಭಾಷೆಗಳ ಚಿತ್ರಗಳ ಚಿತ್ರೀಕರಣ ನಡೆಯುತ್ತಿರುತ್ತದೆ. ಮೈಸೂರಿನಲ್ಲಿ ಚಿತ್ರಿಕರಣಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳು ಇದೆ. ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯಾಗಬೇಕು ಅನ್ನೋದು ಡಾ.ರಾಜ್ಕುಮಾರ್ ಅವರ ಕನಸಾಗಿತ್ತು ಎಂದು ಪತ್ರದಲ್ಲಿ ಹೇಳಿದ್ದಾರೆ.

ಇದೇ ಆಧಾರದಲ್ಲಿ ಹಿಂದಿನ ಸರಕಾರ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ನಿರ್ಣಯ ಮಾಡಿಕೊಂಡಿದ್ದೇವು. ಚಿತ್ರನಗರಿ ಸ್ಥಾಪನೆಗಾಗಿ ನೂರಾರು ಎಕರೆ ಜಮೀನು ಮಂಜೂರು ಮಾಡಿ, ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಆದರೆ ಹೊಸ ಬಜೆಟ್ ನಲ್ಲಿ ಚಿತ್ರನಗರಿಯನ್ನು ರಾಮನಗರಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದ್ದೀರಿ. ಆದರೆ ಈ ನಿರ್ಧಾರ ಮತ್ತೆಮರುಪಶೀಲಿಸಿ ಮೈಸೂರಿನಲ್ಲಿಯೇ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

 

 

 

 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ ಮುಸ್ಲಿಂ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!