
ವಿಜಯಪುರ : ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ವಿಜಯಪುರದ ಜ್ಞಾನಯೋಗಾಶ್ರಮ ಸಿದ್ಧೇಶ್ವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ತಮಗೆ ಪ್ರಶಸ್ತಿ ಬೇಡವೆಂದು ಮನವಿ ಮಾಡಿದ್ದಾರೆ.
ಈ ಪ್ರಶಸ್ತಿ ನೀಡಿದ್ದಕ್ಕೆ ಧನ್ಯವಾದಗಳು, ಆದರೆ ಇಂತಹ ಪ್ರಶಸ್ತಿಗಳನ್ನು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಸಾಧಕರಿಗೆ ನೀಡಿ ಗೌರವಿಸಿ ಎಂದು ಪತ್ರದಲ್ಲಿ ಹೇಳಿದ್ದಾರೆ.
ಅಲ್ಲದೇ ತಾವೊಬ್ಬ ಸಾಮಾನ್ಯ ಆಧ್ಯಾತ್ಮಿಕ ಜೀವಿ. ಅದಕ್ಕಾಗಿ ಈ ಪ್ರಶಸ್ತಿ ಹಿಂದಿರುಗಿಸುತ್ತಿದ್ದೇನೆ. ತಾವುಗಳು ಅನ್ಯಥಾ ತಪ್ಪು ಭಾವಿಸಬೇಡಿ ಶುಭಂ ಎಂದು ಹೇಳಿ ಸಹಿ ಮಾಡಿ ಪ್ರಧಾನಿಗೆ ಪತ್ರ ರವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.