
ಬೆಂಗಳೂರು (ಜ.26): ಸಿದ್ಧಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಮುಕ್ತಾಯಗೊಂಡಿದ್ದು, ಶ್ರೀಗಳಿಗೆ ಸ್ಟಂಟ್ ಅಳವಡಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ನೇತೃತ್ವದಲ್ಲಿ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಈಗ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶ್ರೀಗಳಿಗೆ ಈಗಾಗಲೇ 4 ನೇ ಬಾರಿ ಸ್ಟಂಟ್ ಅಳವಡಿಸಲಾಗಿದೆ. ಇದೀಗ 5 ನೇ ಬಾರಿಗೆ ಸ್ಟಂಟ್ ಅಳವಡಿಕಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಈ ಬಾರಿ ಪಿತ್ತನಾಳದಲ್ಲಿ ಸ್ಟಂಟ್ ಅಳವಡಿಸಲಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ವಿಶೇಷ ವಾರ್ಡ್ಗೆ ಶ್ರೀಗಳನ್ನು ಶಿಫ್ಟ್ ಮಾಡಲಾಗಿದೆ.
ಇಂದು ಒಂದು ದಿನ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಶನಿವಾರ ಅಥವಾ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.