'ಭಾರತಕ್ಕೆ ವಾಪಸ್ ಹೋಗು' ಘೋಷಣೆ ಹಾಗೂ ಗುಂಡೇಟು ತಿಂದ ಸಿಖ್ ವ್ಯಕ್ತಿ

Published : Mar 05, 2017, 02:28 PM ISTUpdated : Apr 11, 2018, 12:49 PM IST
'ಭಾರತಕ್ಕೆ ವಾಪಸ್ ಹೋಗು' ಘೋಷಣೆ ಹಾಗೂ ಗುಂಡೇಟು ತಿಂದ ಸಿಖ್ ವ್ಯಕ್ತಿ

ಸಾರಾಂಶ

ಕೆಂಟ್ ಪೊಲೀಸ್ ಮುಖ್ಯಸ್ಥ ಕೆನ್ ಥಾಮಸ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ದುಷ್ಕರ್ಮಿಯನ್ನು ಹಿಡಿಯುವ ಕಾರ್ಯಾಚರಣೆ ನಡೆದಿದೆ ಎಂದು ಭರವಸೆ ನೀಡಿದ್ದಾರೆ.

ವಾಷಿಂಗ್ಟನ್(ಮಾ. 05): ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯನ ಮೇಲೆ ದಾಳಿಯಾದ ಘಟನೆ ವರದಿಯಾಗಿದೆ. ವಾಷಿಂಗ್ಟನ್ ರಾಜ್ಯದ ಕೆಂಟ್ ನಗರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 39 ವರ್ಷದ ಸಿಖ್ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾನೆ. ಹಲ್ಲೆಗೊಳಗಾದ ಸಿಖ್ ವ್ಯಕ್ತಿಯನ್ನು ದೀಪ್ ರಾಯ್ ಎಂದು ಗುರುತಿಸಲಾಗಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಘಟನೆಯನ್ನು ಗಮನಿಸುತ್ತಿದ್ದು, ಸಿಖ್ ವ್ಯಕ್ತಿಯ ನೆರವಿಗೆ ಧಾವಿಸಿದೆ. ದೀಪ್ ರಾಯ್'ನ ಕೈಗೆ ಬುಲೆಟ್ ತಗುಲಿದ್ದು, ಸಾವಿನ ದವಡೆಯಿಂದ ಪಾರಾಗಿದ್ದಾರೆನ್ನಲಾಗಿದೆ.

ಹೇಗಿದು ಘಟನೆ?
ಕೆಂಟ್'ನಲ್ಲಿರುವ ತಮ್ಮ ಮನೆಯ ಹೊರಗೆ ದೀಪ್ ರಾಯ್ ತನ್ನ ವಾಹನದಲ್ಲಿ ಹೋಗುತ್ತಿರುತ್ತಾರೆ. ಆಗ, 6 ಅಡಿ ಎತ್ತರದ ಬಿಳಿಯ ವ್ಯಕ್ತಿಯೊಬ್ಬ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಎದಿರುಗೊಳ್ಳುತ್ತಾರೆ. ಇಬ್ಬರಿಗೂ ಮಾತಿಗೆ ಮಾತು ಬೆಳೆಯುತ್ತದೆ. ಆ ನಂತರ ಆ ಅಮೆರಿಕನ್ ವ್ಯಕ್ತಿಯು "ನಿನ್ನ ದೇಶಕ್ಕೆ ವಾಪಸ್ ಹೋಗು" ಎಂದು ಕೂಗುತ್ತಾ ರಾಯ್'ನ ಕೈಗೆ ಗುಂಡು ಹೊಡೆಯುತ್ತಾನೆ ಎಂದು ಅಮೆರಿಕದ ಸಿಯಾಟಲ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.

ಕೆಂಟ್ ಪೊಲೀಸ್ ಮುಖ್ಯಸ್ಥ ಕೆನ್ ಥಾಮಸ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ದುಷ್ಕರ್ಮಿಯನ್ನು ಹಿಡಿಯುವ ಕಾರ್ಯಾಚರಣೆ ನಡೆದಿದೆ ಎಂದು ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ
ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ