
ಚಂಡೀಗಡ(ಅ.11): ಚಂಡೀಗಡ ಸಿಖ್ ಮಹಿಳೆಯರಿಗೆ ಹೆಲ್ಮೆಟ್'ನಿಂದ ವಿನಾಯಿತಿ ನೀಡಲು ಅಲ್ಲಿನ ಜಿಲ್ಲಾಡಳಿತ ನಿರ್ಧರಿಸಿದೆ. ಶಿರೋಮಣಿ ಅಕಾಲಿ ದಳದ ಮುಖ್ಯಸ್ಥರಾದ ಸುಖ್ಬೀರ್ ಸಿಂಗ್ ಬಾದಲ್ ಅವರು ಸಿಖ್ ಸಂಘಟನೆಗಳೊಂದಿಗೆ ಕೇಂದ್ರ ಗೃಹ ಸಚಿವ ರಾಜ್'ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರ ಈ ಆದೇಶವನ್ನು ಜಾರಿಗೊಳಿಸಲಾಗಿದೆ.
ಕೇಂದ್ರ ಗೃಹ ಇಲಾಖೆ ಚಂಡೀಗಡ ಜಿಲ್ಲಾಡಳಿತಕ್ಕೆ ಸುತ್ತೋಲೆ ಹೊರಡಿಸಿದ್ದು ದ್ವಿಚಕ್ರ ವಾಹನ ಚಲಾಯಿಸುವ ಸಿಖ್ ಮಹಿಳೆಯರಿಗೆ ಹೆಲ್ಮೆಟ್'ನಿಂದ ವಿನಾಯಿತಿ ನೀಡುವಂತೆ ಆದೇಶ ನೀಡಿದೆ.
ದೆಹಲಿ ಸರ್ಕಾರದ ಸಾರಿಗೆ ಇಲಾಖೆಯು ದೆಹಲಿ ಮೋಟಾರು ಕಾಯಿದೆ 1993ರ 115 ನಿಯಮದ ತಿದ್ದುಪಡಿಯಂತೆ ಜೂನ್ 4, 1999 ರಂದು ಅಧಿಸೂಚನೆ ಹೊರಡಿಸಿ ಮೋಟಾರು ಬೈಕ್ ಚಲಾಯಿಸುವ ಮಹಿಳೆಯರು ಐಚ್ಛಿಕವಾಗಿ ಹೆಲ್ಮೆಟ್ ಧರಿಸಬೇಕು ಎಂಬ ನಿಯಮವಿತ್ತು. 2014, ಆಗಸ್ಟ್ 28ರ ಮತ್ತೊಂದು ಅಧಿಸೂಚನೆಯ ಪ್ರಕಾರ ಮಹಿಳೆಯರ ಬದಲಾಗಿ ಸಿಖ್ ಮಹಿಳೆಯರು ಎಂದು ಮಾರ್ಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.