
ನವದೆಹಲಿ[ಸೆ.30]: ಭ್ರಷ್ಟಾಚಾರ ಆರೋಪದ ಮೇಲೆ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಮೇಲೆ ಹೇರಲಾಗಿದ್ದ 6 ವರ್ಷಗಳ ಅನರ್ಹತೆಯನ್ನು ಚುನಾವಣಾ ಆಯೋಗ 5 ವರ್ಷ ಕಡಿತಗೊಳಿಸಿ 1 ವರ್ಷ 1 ತಿಂಗಳಿಗೆ ಶಿಕ್ಷೆ ಪ್ರಮಾಣ ಇಳಿಸಿ ಆದೇಶ ಹೊರಡಿಸಿದೆ. ಇದು ತಮಾಂಗ್ ಅವರು ಮುಂದಿನ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ.
ಏಪ್ರಿಲ್ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾದ ಸಿಕ್ಕಿಂ ಮುಕ್ತಿ ಮೋರ್ಚಾ ಪಕ್ಷ ಜಯಗಳಿಸಿದೆ. ಅನರ್ಹತೆಯ ಹೊರತಾಗಿಯೂ ಪ್ರೇಮ್ಸಿಂಗ್ ತಮಾಂಗ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಆಯೋಗದ ಈ ಆದೇಶದಿಂದ ತಮಾಂಗ್ ಚುನಾವಣಾ ಸ್ಪರ್ಧೆಗೆ ದಾರಿ ಮಾಡಿಕೊಟ್ಟಿದೆ. ಆದರೆ, ಚುನಾವಣಾ ಆಯೋಗದ ಈ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.