
ನವದೆಹಲಿ: ನರೇಂದ್ರ ಮೋದಿ ಅವರು ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುವ ನಿಟ್ಟಿನಲ್ಲಿ ವ್ಯಾಪಕ ಚರ್ಚೆ ನಡೆಯಬೇಕು ಎಂದು ಪುನಃ ಒತ್ತಿ ಹೇಳಿದರು. ನೀತಿ ಆಯೋಗದ ಸಭೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಏಕಕಾಲಕ್ಕೆ ವಿಧಾನಸಬೆ ಹಾಗೂ ಲೋಕಸಭೆ ಚುನಾವಣೆ ನಡೆಯುವಂತಾಗಲು ಚರ್ಚೆಗಳು ನಡೆಯಬೇಕು.
ಇದರುಂದ ಹಣಕಾಸು ಉಳಿತಾಯವಾಗ್ತುತದೆ ಹಾಗೂ ಸಂಪನ್ಮೂಲಗಳ ಸದ್ಬಳಕೆ ಆಗಲಿದೆ ಎಂದು ಹೇಳಿದರು. ಇದೇ ವೇಳೆ ಕಾರ್ಪೋರೆಟ್ ಕಂಪನಿಗಳು ಕೃಷಿಯಲ್ಲಿ ಅಷ್ಟಾಗಿ ಬಂಡವಾಳ ತೊಡಗಿಸುತ್ತಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರಗಳು ಕಾರ್ಪೋರೆಟ್ ಕಂಪನಿಗಳನ್ನು ಕೃಷಿಯಲ್ಲಿ ತೊಡಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.