ಯಶವಂತಪುರದ ಬಳಿ ಅಪಘಾತದಲ್ಲಿ ಗಾಯಗೊಂಡ ನಟಿ ಸಿಂಧು ಮೆನನ್ ತಾಯಿ:ಚಿಕಿತ್ಸೆ ಬದಲು ಕಿತ್ತಾಡಿದ ಚಾಲಕರು

Published : Sep 28, 2017, 06:35 PM ISTUpdated : Apr 11, 2018, 12:48 PM IST
ಯಶವಂತಪುರದ ಬಳಿ ಅಪಘಾತದಲ್ಲಿ ಗಾಯಗೊಂಡ ನಟಿ ಸಿಂಧು ಮೆನನ್ ತಾಯಿ:ಚಿಕಿತ್ಸೆ ಬದಲು ಕಿತ್ತಾಡಿದ ಚಾಲಕರು

ಸಾರಾಂಶ

ಮಧ್ಯಾಹ್ನ 2.40ರ ಸುಮಾರಿನಲ್ಲಿ ಮತ್ತಿಕೆರೆಯಿಂದ ಮಲ್ಲೇಶ್ವರಂನ ನಿವಾಸಕ್ಕೆ ಶ್ರೀದೇವಿ ಅವರು ಆಟೋದಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕ್ಯಾಬ್ ಒಂದು ಆಟೋ'ಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು(ಸೆ.28): ಸಿಗ್ನಲ್ ನಲ್ಲಿ ನಿಂತಿದ್ದ ಆಟೋಗೆ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ತೆರಳುತಿದ್ದ ಚಿತ್ರನಟಿ ಸಿಂಧು ಮೆನನ್ ತಾಯಿ ಶ್ರೀದೇವಿ ಅವರು ಗಾಯಗೊಂಡಿದ್ದಾರೆ.

ಮಧ್ಯಾಹ್ನ 2.40ರ ಸುಮಾರಿನಲ್ಲಿ ಮತ್ತಿಕೆರೆಯಿಂದ ಮಲ್ಲೇಶ್ವರಂನ ನಿವಾಸಕ್ಕೆ ಶ್ರೀದೇವಿ ಅವರು ಆಟೋದಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕ್ಯಾಬ್ ಒಂದು ಆಟೋ'ಗೆ ಡಿಕ್ಕಿ ಹೊಡೆದಿದೆ. ಶ್ರೀದೇವಿ ಅವರ ಎದೆಯ ಭಾಗಕ್ಕೆ ತೀವ್ರ ಗಾಯವಾಗಿದೆ. ಗಾಯಾಳುವಿಗೆ ಚಿಕಿತ್ಸೆ ಕೊಡಿಸುವ ಬದಲು ಕ್ಯಾಬ್ ಹಾಗೂ ಆಟೋ ಚಾಲಕರು ಜಗಳಕ್ಕಿಳಿದ್ದಿದ್ದಾರೆ.

ಒಂದು ಗಂಟೆ ಕಾಲ ಚಿಕಿತ್ಸೆ ಸಿಗದೆ ಆಟೋದಲ್ಲಿದ್ದ ಶ್ರೀದೇವಿ ಅವರು ನಂತರ ತಮ್ಮ ಪುತ್ರ ಮನೋಜ್ ಅವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮನೋಜ್ ತಾಯಿಯನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕ ಬೈರತಿಗೆ ಕಂಟಕವಾದ ಕುಂಭಮೇಳ ಯಾತ್ರೆ!
ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?