
ಸಿಂಗಾಪುರ[ಅ.03]: ಸುಳ್ಳು ಸುದ್ದಿ ಹರಡುವವರ ವಿರುದ್ಧ ಭಾರಿ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಸುಳ್ಳು ಸುದ್ದಿ ತಡೆ ಕಾಯ್ದೆಯನ್ನು ಸಿಂಗಾಪುರ ಸರ್ಕಾರ ಬುಧವಾರ ಜಾರಿಗೊಳಿಸಿದೆ. ದೇಶಾದ್ಯಂತ ತಂತ್ರಜ್ಞಾನ ದಿಗ್ಗಜರು ಹಾಗೂ ಹೋರಾಟಗಾರರ ತೀವ್ರ ಪ್ರತಿಭಟನೆಯ ಹೊರತಾಗಿಯೂ ಸರ್ಕಾರ ಈ ಕಾಯ್ದೆ ಜಾರಿಗೆ ತಂದಿದ್ದು, ಸರ್ಕಾರದ ಈ ನಿರ್ಧಾರ ಅಭಿವ್ಯಕ್ತಿ ಸ್ವಾತಂತ್ರದ ಹರಣ ಎಂದು ದೂರಿದ್ದಾರೆ.
ಸುಳ್ಳು ಸುದ್ದಿ ಪ್ರಸಾರ ತಡೆಗೆ ವಿಶ್ವಸಂಸ್ಥೆಯೊಂದಿಗೆ ಭಾರತ ಸಹಿ!
ಈ ಹೊಸ ಕಾಯ್ದೆಯಿಂದಾಗಿ ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಬೀಳಲಿದ್ದು, ಸುಳ್ಳು ಸುದ್ದಿಗಳನ್ನು ಹರಡುವ ಪೋಸ್ಟ್ಗಳನ್ನು ಅಪ್ಲೋಡ್ ಮಾಡಿದರೆ ಅಲ್ಲೇ ಎಚ್ಚರಿಕೆ ಸಂದೇಶ ಬರುತ್ತದೆ. ಸುದ್ದಿ ತೀವ್ರ ತರಹದ್ದಾಗಿದ್ದರೆ ಅಂಥವುಗಳನ್ನು ತೆಗೆದು ಹಾಕಲಾಗುತ್ತದೆ.
ಫೇಕ್ ನ್ಯೂಸ್ ವಿರುದ್ಧ ಸಮರ ಯಾವ ದೇಶದಲ್ಲಿ ಹೇಗಿದೆ?
ಈ ಕಾಯ್ದೆಯಡಿ ದೇಶದ ಕುರಿತು ದುರುದ್ದೇಶಪೂರಿತ ಹಾಗೂ ಹಾನಿಕಾರ ಸುದ್ದಿ ಪ್ರಕಟಿಸಿದ ಕಂಪನಿಗಳಿಗೆ 5 ಕೋಟಿ ರು. ದಂಡ ಮತ್ತು 10 ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. ಸದ್ಯ ಸಿಂಗಾಪುರದಲ್ಲಿ ಮುಖ್ಯ ಕಚೇರಿ ಹೊಂದಿರುವ ಫೇಸ್ಬುಕ್, ಟ್ವಿಟರ್ ಹಾಗೂ ಗೂಗಲ್ಗೆ ಈ ಕಾಯ್ದೆಯಲ್ಲಿನ ಕೆಲ ಅಂಶಗಳಿಂದ ತಾತ್ಕಾಲಿಕ ಅವಧಿಗೆ ವಿನಾಯ್ತಿ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.