
ನವದೆಹಲಿ: ಖ್ಯಾತ ಗಾಯಕ, ಪಂಜಾಬಿ ಹಾಡುಗಳ ಮೂಲಕವೇ ದೇಶಾದ್ಯಂತ ಮನೆಮಾತಾಗಿರುವ ದಲೇರ್ ಮೆಹಂದಿ, ಶುಕ್ರವಾರ ಬಿಜೆಪಿ ಸೇರಿದರು.
ದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ದಲೇರ್ ಬಿಜೆಪಿ ಸೇರಿದರು.
ವಾಯವ್ಯ ದೆಹಲಿಯ ಬಿಜೆಪಿ ಅಭ್ಯರ್ಥಿ ಹಂಸರಾಜ್ ಹಂಸ್ ಕೂಡಾ ಈ ವೇಳೆ ಉಪಸ್ಥಿತರಿದ್ದರು. ಹಂಸರಾಜ್ ಅವರ ಮಗ, ದಲೇರ್ ಮೆಹಂದಿ ಅವರ ಮಗಳನ್ನು ವಿವಾಹವಾಗಿದ್ದಾರೆ.
ಈ ಹಿಂದೆ ದಲೇರ್ ಮೆಹೆಂದಿ ಮಾನವ ಕಳ್ಳ ಸಾಗಣಿಕೆ ಪ್ರಕರಣದಲ್ಲಿ ದಲೇರ್ ಮೆಹೆಂದಿ ಜೈಲು ಶಿಕ್ಷೆ ಅನುಭವಿಸಿ, ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.