
ಬೆಂಗಳೂರು (ಆ. 2): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧ ವಿವಿಧ ಇಲಾಖೆಗಳ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹೀಗಾಗಿ ಬಿಎಸ್ವೈ ಬರುವುದನ್ನು ತಿಳಿಯಲು ಅಧಿಕಾರಿಗಳು ತಮ್ಮ ಕಚೇರಿಗಳಿಗೆ ಸೈರನ್ ಅಳವಡಿಸಿಕೊಂಡಿದ್ದಾರೆ.
ವಿಧಾನಸೌಧಕ್ಕೆ ದಿಢೀರ್ ಭೇಟಿ; ನೌಕರರಿಗೆ ಚುರುಕು ಮುಟ್ಟಿಸಿದ ಸಿಎಂ
ಬಿಎಸ್ವೈ ವಿಧಾನಸೌಧಕ್ಕೆ ಕಾಲಿಡುತ್ತಿದ್ದಂತೆ ಎಲ್ಲ ಕಚೇರಿಯಲ್ಲಿ ಸೈರನ್ ಹೊಡೆದು ಕೊಳ್ಳಲಿದೆ. ಈ ಶಬ್ದ ಕೇಳುತ್ತಿದ್ದಂತೆ ಅಧಿಕಾರಿಗಳು ತಕ್ಷಣ ಬಂದು ತಮ್ಮ ಆಸನದಲ್ಲಿ ಕುಳಿತು ಕೆಲಸ ಮಾಡಲಿದ್ದಾರೆ. ಒಂದು ವೇಳೆ ಅಧಿಕಾರಿಗಳು ಬರದೇ ಇದ್ದರೆ ಅವರ ಸೀಟಿನಲ್ಲಿ ಇನ್ನೊಬ್ಬರನ್ನು ಕೂರಿಸಲು ವ್ಯವಸ್ಥೆ ಮಾಡಿ ಕೊಂಡಿದ್ದಾರೆ.
ಇದಕ್ಕಾಗಿ ವಿಧಾನಸೌಧದ ಮುಂಭಾಗದಲ್ಲಿ ವಿಶೇಷ ಸಿಸಿಟೀವಿ ಕ್ಯಾಮರಾವೊಂದನ್ನು ಅಳವಡಿಸಲಾಗಿದೆ. ಯಡಿಯೂರಪ್ಪ ವಿಧಾನಸಭೆಯಿಂದ ನಿರ್ಗಮಿಸುತ್ತಿದ್ದಂತೆ ಮತ್ತೊಮ್ಮೆ ಸೈರನ್ ಶಬ್ದವಾಗಲಿದೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.