ಶಿರಸಿಯಲ್ಲಿ ಉದ್ವಿಗ್ನ ಸ್ಥಿತಿ; ಕಾಗೇರಿ ಸೇರಿ ಹಲವರ ಬಂಧನ

Published : Dec 12, 2017, 11:59 AM ISTUpdated : Apr 11, 2018, 01:13 PM IST
ಶಿರಸಿಯಲ್ಲಿ ಉದ್ವಿಗ್ನ ಸ್ಥಿತಿ; ಕಾಗೇರಿ ಸೇರಿ ಹಲವರ ಬಂಧನ

ಸಾರಾಂಶ

ಶಿರಸಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್  ಬಿಗಿ ಭದ್ರತೆಯ ನಡುವೆಯೂ ಕಲ್ಲು ತೂರಾಟ ಮುಂದಿವರೆದಿದೆ. ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು (ಡಿ.12): ಶಿರಸಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್  ಬಿಗಿ ಭದ್ರತೆಯ ನಡುವೆಯೂ ಕಲ್ಲು ತೂರಾಟ ಮುಂದಿವರೆದಿದೆ. ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಶಿರಸಿ ನಗರದ ಕೋರ್ಟ್ ರಸ್ತೆ ಸೇರಿದಂತೆ ನಾಲ್ಕಾರು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿದೆ. ಮಾಧ್ಯಮದವರ ಮೇಲೆ ಕಲ್ಲು ತೂರಾಟ ನಡೆದಿದ್ದು ಇಬ್ಬರು ಪತ್ರಕರ್ತರಿಗೆ ಗಾಯವಾಗಿದೆ  ಅಗ್ನಿಶಾಮಕದಳ ವಾಹನ ಸೇರಿ  6 ವಾಹನಗಳು ಜಖಂಗೊಂಡಿದೆ.  ಕಾರ್ಯಕರ್ತರು ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಪರಿಸ್ಥಿತಿ ಸುಧಾರಿಸಲು ಆರಕ್ಷಕರು ಹರಸಾಹಸ ಪಡುತ್ತಿದ್ದಾರೆ. ಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿ ಹಲವರನ್ನು ಬಂಧಿಸಲಾಗಿದೆ.

ಈ ಹಿನ್ನಲೆಯಲ್ಲಿ ಸಿಎಂ ನಿವಾಸದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸಿಎಂ  ಭೇಟಿ ಮಾಡಿ ಸತತ ಒಂದು ಗಂಟೆಯಿಂದ ಚರ್ಚೆ ನಡೆಸುತ್ತಿದ್ದಾರೆ.  ಗೃಹ ಸಚಿವರ ಜೊತೆ ಡಿಐಜಿ ನೀಲಮಣಿ ರಾಜು ಕೂಡ ಭಾಗಿಯಾಗಿದ್ದಾರೆ.  ಸಿಎಂ ಇಬ್ಬರಿಂದ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!