IMA ವಂಚನೆ: SIT ಬಲೆಗೆ ಭಾರೀ ತಿಮಿಂಗಿಲ! ಬೆಂಗಳೂರು DC ಬಂಧನ!

Published : Jul 08, 2019, 08:40 PM IST
IMA ವಂಚನೆ: SIT ಬಲೆಗೆ ಭಾರೀ ತಿಮಿಂಗಿಲ! ಬೆಂಗಳೂರು DC ಬಂಧನ!

ಸಾರಾಂಶ

ಹಲಾಲ್ ಹೂಡಿಕೆ ಹೆಸರಿನಲ್ಲಿ ಹೂಡಿಕೆದಾರರಿಗೆ ಕೋಟ್ಯಂತರ ರೂ. ವಂಚಿಸಿ IMA ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ತಲೆಮರೆಸಿಕೊಂಡಿದ್ದಾನೆ. ಇಲ್ಲಿ ಒಬ್ಬರ ಹಿಂದೆ ಇನ್ನೊಬ್ಬ ಸರ್ಕಾರಿ ಅಧಿಕಾರಿಗಳು ಕಂಬಿಯ ಹಿಂದೆ ಹೋಗುತ್ತಿದ್ದಾರೆ. 

ಬೆಂಗಳೂರು (ಜು.08): ಕಳೆದ ತಿಂಗಳು ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ IMA ಬಹುಕೋಟಿ ವಂಚನೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ, ತನಿಖೆ ನಡೆಸುತ್ತಿರುವ SIT ತಂಡವು ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನೇ ಬಂಧಿಸಿದೆ.

IMA ಕಂಪನಿ ಪರ ವರದಿ ನೀಡಲು ಲಂಚ‌ ಸ್ವೀಕರಿಸಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ DC ವಿಜಯ್ ಶಂಕರ್‌ರನ್ನು SITಯು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.   

ವಿಚಾರಣೆ ನಡೆಸಿದ DCP ಗಿರೀಶ್ ನೇತೃತ್ವದ ಅಧಿಕಾರಿಗಳ ತಂಡ ಅವರನ್ನು ಬಂಧಿಸಿದೆ. ಮನ್ಸೂರ್ ಖಾನ್‌ನಿಂದ 1.5 ಕೋಟಿ ರೂ. ಲಂಚ ಪಡೆದ ಆರೋಪ ವಿಜಯ್ ಶಂಕರ್ ಮೇಲಿದೆ.

ಕಳೆದ ವಾರವಷ್ಟೇ, IMA ಪರ ವರದಿ ನೀಡಲು ಲಂಚ ಪಡೆದಿರುವ ಆರೋಪದಲ್ಲಿ ಅಸಿಸ್ಟೆಂಟ್ ಕಮಿಷನರ್ ಎಲ್. ನಾಗರಾಜು ಎಂಬವರನ್ನು SITಯು ಬಂಧಿಸಿತ್ತು.

ಅದಕ್ಕಿಂತ ಮುಂಚೆ, ಬ್ಯಾಂಕ್‌ನಲ್ಲಿ 600 ಕೋಟಿ  ರು. ಸಾಲ ಪಡೆಯಲು ಸರ್ಕಾರದ ಎನ್‌ಓಸಿ ಕೊಡಿಸುವುದಾಗಿ ನಂಬಿಸಿ ಐಎಂಎ ಸಂಸ್ಥೆ ಮಾಲೀಕನಿಂದ 4 ಕೋಟಿ ರು. ಹಣ ಪಡೆದ ಆರೋಪದ ಮೇರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾರ್ಯನಿರ್ವಾಹಕ ಅಭಿಯಂತರ ಕುಮಾರ್‌ ಎಂಬವರನ್ನು ಬಂಧಿಸಲಾಗಿತ್ತು.

ಕಳೆದ ತಿಂಗಳಾಂತ್ಯದಲ್ಲಿ  ಆಡಳಿತಾರೂಢ ಜೆಡಿಎಸ್‌ನ ನಾಮ ನಿರ್ದೇಶಿತ ಬಿಬಿಎಂಪಿ ಸದಸ್ಯ ಸೈಯದ್ ಮುಜಾಹಿದ್ ಎಂಬವರನ್ನು SIT ಬಂಧಿಸಿತ್ತು. 

ಹಲಾಲ್ ಹೂಡಿಕೆ ಹೆಸರಿನಲ್ಲಿ ಹೂಡಿಕೆದಾರರಿಗೆ ಕೋಟ್ಯಂತರ ರೂ. ವಂಚಿಸಿ IMA ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ತಲೆಮರೆಸಿಕೊಂಡಿದ್ದಾನೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ-ಪುಟಿನ್‌ ಸೆಲ್ಫಿ ತೋರಿಸಿ ಟ್ರಂಪ್‌ ವಿರುದ್ಧ ಸಂಸದೆಯ ಕಿಡಿ
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ