ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಹಂತಕರು ?

Published : Nov 11, 2017, 01:26 PM ISTUpdated : Apr 11, 2018, 01:08 PM IST
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಹಂತಕರು ?

ಸಾರಾಂಶ

ರೇಖಾಚಿತ್ರದ ಆಧಾರದ ಮೇಲೆ ಶಂಕಿತ ಹಂತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಗೋಪ್ಯ ಸ್ಥಳದಲ್ಲಿ ಕಳೆದ ಒಂದು ವಾರದಿಂದ ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಬೆಂಗಳೂರು(ನ.11): ಪತ್ರಕರ್ತೆ ಗೌರಿ ಲಂಕೆಶ್​​ ಹತ್ಯೆ ಪ್ರಕರಣಕ್ಕೆ ಮೆಗಾ ಟ್ವಿಸ್ಟ್​ ದೊರಕಿದೆ. ಕೊನೆಗೂ  ಎಸ್'ಐಟಿ ಬಲೆಗೆ ಶಂಕಿತ ಮೂವರು ಹಂತಕರು ಸಿಕ್ಕಿದ್ದಾರೆ ಎನ್ನಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ.

ರೇಖಾಚಿತ್ರದ ಆಧಾರದ ಮೇಲೆ ಶಂಕಿತ ಹಂತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಗೋಪ್ಯ ಸ್ಥಳದಲ್ಲಿ ಕಳೆದ ಒಂದು ವಾರದಿಂದ ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ರೇಖಾಚಿತ್ರ ಹೋಲಿಕೆಯ ಮೇಲೆ ಶಂಕಿತರ ಮೂವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ವಾರ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ಭಾವಚಿತ್ರ ಹೋಲಿಕೆಯಿದ್ದ ಈ ಮೂವರ ಬಗ್ಗೆ ಗದಗದ ಎಸ್'ಪಿಗೆ ಸಾರ್ವಜನಿಕರು ದೂರು ನೀಡಿದ್ದರು.

ಈ ಮಾಹಿತಿಯನ್ನು ಆಧರಿಸಿ ಎಸ್ಐಟಿ ತಂಡ ಬೆಂಗಳೂರಿಗೆ ಕರೆತಂದಿದೆ ಎನ್ನಲಾಗಿದೆ. ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5 ರಂದು ಸಂಜೆ ಅಪರಿಚಿತರು ಗುಂಡಿಕ್ಕಿ ಕೊಂದಿದ್ದರು. ಈ ಹತ್ಯೆಯ ನಂತರ ದೇಶಾದ್ಯಂತ ವಿವಿಧ ವಲಯದಿಂದ ಪ್ರತಿಭಟನೆ ನಡೆದಿತ್ತು. ಹತ್ಯೆಯನ್ನು ಭೇದಿಸಲು ರಾಜ್ಯ ಸರ್ಕಾರ 100 ಮಂದಿ ಸಿಬ್ಬಂದಿಯುಳ್ಳ ಎಸ್ಐಟಿ ತಂಡವನ್ನು ರಚಿಸಿತ್ತು.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?