
ಬೆಂಗಳೂರು: ಜಂತಕಲ್ ಮೈನಿಂಗ್ ಅಕ್ರಮ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಧರಂಸಿಂಗ್’ಗೆ ಎಸ್ಐಟಿಯು ನೋಟಿಸ್ ಜಾರಿ ಮಾಡಿದೆ.
ಜುಲೈ 30ರಂದು ತನಿಖಾಧಿಕಾರಿ ಮುಂದೆ ಹಾಜರಾಗಲು ಧರಂ ಸಿಂಗ್’ಗೆ ಸೂಚನೆ ನೀಡಲಾಗಿದೆ. ಧರಂ ಸಿಂಗ್ ಅವರಿಗೆ ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಅವರ ಪುತ್ರ ಎಸ್ಐಟಿ ಅಧಿಕಾರಿ ಮುಂದೆ ಹಾಜರಾಗಿ ಧರಂ ಸಿಂಗ್ ಹಾಜರಾಗಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಧರಂ ಸಿಂಗ್ ಅವರು ನಡೆದಾಡಲು ಸಾಧ್ಯವಾಗದಷ್ಟು ಅನಾರೋಗ್ಯ ಹಿನ್ನೆಲೆಯಲ್ಲಿ ಜುಲೈ 30 ಒಳಗೆ ಪ್ರಕರಣಕ್ಕೆ ಸಂಬಂಧಿಸಿದ ಲಿಖಿತ ಹೇಳಿಕೆ ನೀಡುವುದಾಗಿ ತಿಳಿಸಿದ್ದಾರೆಂದು ಎಸ್ಐಟಿ ಮೂಲಗಳು ಸುವರ್ಣ ನ್ಯೂಸ್’ಗೆ ಮಾಹಿತಿ ನೀಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.