ಹಿಂದೂ ಕಾರ್ಯಕರ್ತನ ಸೆರೆ: ಗೌರಿ ಹಂತಕ ಎಂಬ ವದಂತಿ

Published : Feb 24, 2018, 07:11 AM ISTUpdated : Apr 11, 2018, 12:41 PM IST
ಹಿಂದೂ ಕಾರ್ಯಕರ್ತನ ಸೆರೆ: ಗೌರಿ ಹಂತಕ ಎಂಬ ವದಂತಿ

ಸಾರಾಂಶ

ಅಕ್ರಮ ಶಸ್ತ್ರಾಸ್ತ್ರ ಕಾಯ್ಡೆಯಡಿ ಮದ್ದೂರು ತಾಲೂಕಿನ ಹಿಂದೂ ಪರ ಸಂಘಟನೆಯ ಕಾರ್ಯಕರ್ತನೊಬ್ಬನ ಎಸ್‌ಐಟಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಂಜುನಾಥ ಅಲಿಯಾಸ್‌ ಹೊಟ್ಟೆಮಂಜ ಎಂಬಾತನೇ ಸೆರೆಯಾಗಿದ್ದು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆತನ ಬಂಧನವಾಗಿದೆ ಎಂದು ವಂದತಿಗಳು ಹರಡಿವೆ.

ಬೆಂಗಳೂರು : ಅಕ್ರಮ ಶಸ್ತ್ರಾಸ್ತ್ರ ಕಾಯ್ಡೆಯಡಿ ಮದ್ದೂರು ತಾಲೂಕಿನ ಹಿಂದೂ ಪರ ಸಂಘಟನೆಯ ಕಾರ್ಯಕರ್ತನೊಬ್ಬನ ಎಸ್‌ಐಟಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಂಜುನಾಥ ಅಲಿಯಾಸ್‌ ಹೊಟ್ಟೆಮಂಜ ಎಂಬಾತನೇ ಸೆರೆಯಾಗಿದ್ದು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆತನ ಬಂಧನವಾಗಿದೆ ಎಂದು ವಂದತಿಗಳು ಹರಡಿವೆ.

ಅಕ್ರಮಶಸ್ತ್ರಾಸ್ತ್ರ ಕುರಿತು ಮಾಹಿತಿ ಕಲೆ ಹಾಕುವಾಗ ಮದ್ದೂರಿನ ಮಂಜುನಾಥನ ಬಗ್ಗೆ ಸುಳಿವು ಸಿಕ್ಕಿತು. ಈ ಸುಳಿವು ಆಧರಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ಅನುಮಾನದ ಮೇರೆಗೆ ಗೌರಿ ಲಂಕೇಶ್‌ ಪ್ರಕರಣದಲ್ಲಿ ಸಹ ಪ್ರಶ್ನಿಸಲಾಯಿತು. ಆದರೆ ಆತನ ಪಾತ್ರವಿರುವುದು ಖಚಿತವಾಗಿಲ್ಲ ಎಂದು ಉನ್ನತ ಮೂಲಗಳು ‘ಕನ್ನಡಪ್ರಭ’ಕ್ಕೆ ತಿಳಿಸಿವೆ.

ಮೂರು ದಿನಗಳ ಹಿಂದೆ ಮಂಜನನ್ನು ವಶಕ್ಕೆ ಪಡೆದ ಪೊಲೀಸರು, ಆತನ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ ಎನ್ನಲಾಗಿದೆ. ಆತನಿಂದ ವಿವಿಧ ಬಂದೂಕುಗಳ ಜೀವಂತ ಗುಂಡುಗಳು ಹಾಗೂ ಒಂದು ನಾಡಾ ಪಿಸ್ತೂಲ್‌ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮದ್ದೂರು ತಾಲೂಕಿನ ಹಿಂದೂ ಜಾಗೃತಿ ವೇದಿಕೆ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿರುವ ಆತ, ಶೋಕಿಗಾಗಿ ಕಳಪೆ ಮಟ್ಟದ ಬಂದೂಕು ಇಟ್ಟುಕೊಂಡಿದ್ದ. ಇದುವರೆಗೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಪತ್ತೆಯಾಗಿಲ್ಲ. ಈ ಎಲ್ಲಾ ಆಯಾಮದಲ್ಲೂ ತನಿಖೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನೊಂದೆಡೆ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಸಂಬಂಧ ಯಾರನ್ನೂ ಬಂಧಿಸಿಲ್ಲ. ಈ ಬಗ್ಗೆ ಕೆಲವು ಸುಳ್ಳು ಸುದ್ದಿ ಪ್ರಚಾರವಾಗಿವೆ ಎಂದು ಪ್ರಕರಣದ ತನಿಖಾಧಿಕಾರಿಯೂ ಆಗಿರುವ ಪಶ್ಚಿಮ ವಿಭಾಗ ಡಿಸಿಪಿ ಎಂ.ಎನ್‌. ಅನುಚೇತ್‌ ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯದಲ್ಲಿ ಸೆಮಿಕಂಡಕ್ಟರ್ ಘಟಕಕ್ಕೆ ಜಾಗ ಕೊಡಿ: ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಪತ್ರ
ಸಂಕ್ರಮಣ ನಂತ್ರ ಸಿಎಂ ಬದಲು ಆಗ್ತಾರೆ, ಆಗಲ್ಲ ಎರಡೂ ಇದೆ: ಸಚಿವ ಸತೀಶ್‌ ಜಾರಕಿಹೊಳಿ