
ಬೆಂಗಳೂರು, [ಜೂ. 20]: ಐಎಂಎ ವಂಚನೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಜ್ಯ ಎಸ್ಐಟಿ (ವಿಶೇಷ ತನಿಖಾ ತಂಡ)ವು ಇಂದೂ ಸಹ ಐಎಂಎ ಆಭರಣ ಮಳಿಗೆಗಳ ಮೇಲೆ ದಾಳಿ ಮುಂದುವರೆಸಿತ್ತು.
ಇಂದು [ಗುರುವಾರ] ವಿಶೇಷ ತನಿಖಾ ತಂಡ ಬೆಂಗಳೂರಿನ ಶಿವಾಜಿನಗರದ ಐಎಂಎ ಚಿನ್ನಾಭರಣ ಅಂಗಡಿ ಮೇಲೆ ನಡೆಸಿದ್ದು, ಭಾರೀ ಪ್ರಮಾಣದ ಚಿನ್ನಾಭರಣವನ್ನು ವಶಪಡಿಸಿಕೊಂಡಿದೆ.
ಐಎಂಎ ಜುವೆಲ್ಸ್ ಪರಿಶೀಲನೆ: ಎಷ್ಟು ಸಿಗಬಹುದು ಚಿನ್ನಾಭರಣ?
ಬೀಗ ಹಾಕಿದ್ದ ಶಿವಾಜಿನಗರದ ಐಎಂಎ ಚಿನ್ನಾಭರಣ ಅಂಗಡಿಯ ಬೀಗ ಮುರಿದು ಒಳ ಪ್ರವೇಶಿಸಿದ ಎಸ್ಐಟಿ ತಂಡವು, ಷೋಕೋಸಿನಲ್ಲಿಟ್ಟದ್ದ ಚಿನ್ನದ ಜತೆಗೆ ದಾಸ್ತಾನು ಮಾಡಿಡಲಾಗಿದ್ದ ಚಿನ್ನವನ್ನೂ ವಶಪಡಿಸಿಕೊಂಡಿದ್ದಾರೆ.
ಅರಬ್ ದೇಶಗಳಲ್ಲೂ IMA ಮಹಾ ವಂಚನೆ ಬೆಳಕಿಗೆ
30 ಕೆಜಿ ಚಿನ್ನ, 450 ಕೆಜಿ ಬೆಳ್ಳಿ ಹಾಗೂ 2630 ಕ್ಯಾರೆಟ್ ವಜ್ರ ಸೇರಿದಂತೆ ಕೆಲ ಆಸ್ತಿ ಪತ್ರಗಳು ಸಿಕ್ಕಿವೆ. ಇದರ ಅಂದಾಜು ಮೌಲ್ಯ 20 ಕೋಟಿ ರು.ಎಂದು ತಿಳಿದುಬಂದಿದೆ.
ಕಚೇರಿಯಲ್ಲಿ ದೊರೆತ ವಸ್ತುಗಳನ್ನು ಪಂಚನಾಮೆ ನಡೆಸಿದ ಅಧಿಕಾರಿಗಳು, 20 ಟ್ರಂಕ್ ಗಳಲ್ಲಿ ಚಿನ್ನಾಭರಣಗಳನ್ನು ತುಂಬಿಕೊಂಡು ತೆರಳಿ ವಿಧಾನಸೌದದಲ್ಲಿರುವ ಟ್ರಜರಿಯಲ್ಲಿ ಭದ್ರಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.