ಶಿವಕಾಶಿ ಪಟಾಕಿ ಉದ್ಯಮ ಬಂದ್

Published : Dec 24, 2017, 11:59 AM ISTUpdated : Apr 11, 2018, 12:35 PM IST
ಶಿವಕಾಶಿ ಪಟಾಕಿ ಉದ್ಯಮ ಬಂದ್

ಸಾರಾಂಶ

8 ಲಕ್ಷ ಉದ್ಯೋಗಿಗಳಿಗೆ ಸಂಕಷ್ಟ ಕಳೆದ ದೀಪಾವಳಿ ಸಂದರ್ಭ ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸುಪ್ರೀಂ ನಿಷೇಧ

ಚೆನ್ನೈ: ಪಟಾಕಿ ಉದ್ಯಮದ ಭವಿಷ್ಯದ ಬಗ್ಗೆ ಅನಿಶ್ಚಿತತೆ ಇರುವುದರಿಂದ, ತಮಿಳುನಾಡಿನ ಶಿವಕಾಶಿಯಲ್ಲಿನ ಪಟಾಕಿ ತಯಾರಕ ಕಂಪೆನಿಗಳು ತಮ್ಮ ಘಟಕಗಳನ್ನು ಮುಚ್ಚಲು ನಿರ್ಧರಿಸಿವೆ.

ಕಾನೂನು ಪರಿಹಾರ ದೃಢಗೊಳ್ಳುವವರೆಗೂ ಶನಿವಾರದಿಂದ ಪಟಾಕಿ ಘಟಕಗಳು ಮುಚ್ಚಲಿವೆ ಎಂದು ಅಖಿಲ ಭಾರತ ಪಟಾಕಿ ತಯಾರಕ ಸಂಸ್ಥೆಗಳ ಒಕ್ಕೂಟ ತಿಳಿಸಿದೆ.

ಈ ನಿರ್ಧಾರ ಪಟಾಕಿ ತಯಾರಕ ಉದ್ಯಮದಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ 8 ಲಕ್ಷ ಜನರ ಮೇಲೆ ನೇರ ಅಥವಾ ಪರೋಕ್ಷ ಪರಿಣಾಮ ಬೀರಲಿದೆ.

ಪ್ರಕರಣವನ್ನು ಸುಪ್ರೀಂ ಕೋರ್ಟ್ ಬೇಗನೇ ಆಲಿಸಿ, ಅನಿಶ್ಚಿತತೆಯನ್ನು ನಿವಾರಿಸುವ ನಿಟ್ಟಿನಲ್ಲಿ ತೀರ್ಪು ಬರಲಿ ಎಂಬುದಾಗಿ ಪಟಾಕಿ ಉದ್ಯಮ ಬಯಸುತ್ತದೆ ಎಂದು ಎಐಎಫ್‌ಎಫ್‌ಎ ಉಪಾಧ್ಯಕ್ಷ ಕೆ. ಮರಿಯಪ್ಪನ್ ಹೇಳಿದ್ದಾರೆ.

ಕಳೆದ ದೀಪಾವಳಿ ಸಂದರ್ಭ ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!