ಗಾಜಾ ಚಂಡಮಾರುತದಿಂದ ಕಡಲೂರಿನಲ್ಲಿ ಎರಡು ಹಾಗೂ ತಂಜಾವೂರಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಯಾವೆಲ್ಲ ಪ್ರದೇಶಗಳಿಗೆ ಚಂಡಮಾರುತ ಪ್ರವೇಶಿಸುವ ಅನುಮಾನ ವ್ಯಕ್ತವಾಗಿದೆಯೋ ಆ ಎಲ್ಲಾ ಭಾಗಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಈಗಾಗಲೇ 76 ಸಾವಿರ ಮಂದಿಯನ್ನು ಮನೆಯಿಂದ ದೂರ ನಿರಾಶ್ರಿತರ ಕೇಂದ್ರಕ್ಕೆ ರವಾನಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.