ಪೊಲೀಸರಿಂದ ಗೌರಿ ಹಂತಕರ ರೇಖಾ ಚಿತ್ರ ಬಿಡುಗಡೆ

Published : Oct 14, 2017, 11:36 AM ISTUpdated : Apr 11, 2018, 01:05 PM IST
ಪೊಲೀಸರಿಂದ ಗೌರಿ ಹಂತಕರ ರೇಖಾ ಚಿತ್ರ ಬಿಡುಗಡೆ

ಸಾರಾಂಶ

ಸ್ಥಳೀಯರ ಹೇಳಿಕೆ ಹಾಗೂ ಗೌರಿ ಲಂಕೇಶ್ ಅವರ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ 10 ಸೆಕೆಂಡ್ ದೃಶ್ಯಾವಳಿ ಆಧರಿಸಿ ರೇಖಾಚಿತ್ರ ಸಿದ್ಧಪಡಿಸಲಾಗಿದೆ. ಹಂತಕರ ರೇಖಾಚಿತ್ರಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದರೆ ಆರೋಪಿಗಳ ಚಲನವಲನಗಳನ್ನು ಬೇಗ ಪತ್ತೆಹಚ್ಚಬಹುದು ಎಂಬುದು ಪೊಲೀಸರ ತಂತ್ರವಾಗಿದೆ.

ಬೆಂಗಳೂರು(ಅ. 14): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 38 ದಿನಗಳ ಬಳಿಕ ಎಸ್'​​ಐಟಿ ರೇಖಾಚಿತ್ರ ರಿಲೀಸ್​ ಮಾಡಿದೆ. ಇಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್'​ಐಟಿ ತಂಡ, ಮೂವರು ಹಂತಕರ ರೇಖಾಚಿತ್ರಗಳನ್ನು ಬಿಡುಗಡೆ​ ಮಾಡಿತು.  ಎಸ್​ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್​, ಡಿಸಿಪಿ ಅನುಚೇತ್​ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಮೂವರಲ್ಲಿ ಪ್ರಮುಖ ಇಬ್ಬರನ್ನು ಗುರುತಿಸಲಾಗಿದೆ. ತಾಂತ್ರಿಕತೆ ಮತ್ತು ಸ್ಥಳೀಯರ ಸಹಾಯದಿಂದ ಆ ಇಬ್ಬರನ್ನು ಗುರುತಿಸಲಾಗಿದೆ. ಗುರುತಿಸಲಾದ ಇಬ್ಬರು 1 ವಾರದಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ರು. ಬೆಂಗಳೂರಿನಲ್ಲಿ 7 ದಿನ ವಾಸವಿದ್ದು ಗೌರಿಯನ್ನ ಹತ್ಯೆಗೈದಿದ್ದಾರೆ.

ವೃತ್ತಿ ನಿರತ ಹಂತಕರಿಂದಲೇ ಗೌರಿ ಹತ್ಯೆಯಾಗಿದೆ ಅಂತ ಅಧಿಕಾರಿಗಳು ಹೇಳಿದ್ರು. ನರೇಂದ್ರ ದಾಬೋಲ್ಕರ್ ಹಂತಕರಿಗೂ ಗೌರಿ ಹಂತಕರಿಗೂ ಸಾಮ್ಯತೆ ಇಲ್ಲ. ಹತ್ಯೆಯಲ್ಲಿ ಸನಾತನ ಸಂಸ್ಥೆಯ ಇದೆ ಎನ್ನುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂಬುದನ್ನ ತನಿಖಾಧಿಕಾರಿಗಳು ಸ್ಪಷ್ಟಪಡಿಸಿದರು.

ಗೌರಿ ಲಂಕೇಶ್'ರನ್ನು ಕೊಲ್ಲಲು ಹಂತಕರು 7.65 ಕಂಟ್ರಿಮೇಡ್​ ಗನ್'ನ್ನು ಉಪಯೋಗಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳು ತಿಳಿಸಿದರು. ಈವರೆಗೆ 250ಕ್ಕೂ ಹೆಚ್ಚು ಜನರನ್ನು ತನಿಖೆ ನಡೆಸಿದ್ದೇವೆ ಎಂದೂ ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್​ ಮಾಹಿತಿ ನೀಡಿದರು.

ಇದೇ ವೇಳೆ, ಹಂತಕರನ್ನು ನೋಡಿದರೆನ್ನಲಾದ ಕೆಲ ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆ ನಡೆಸಿ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ. ಸ್ಥಳೀಯರ ಹೇಳಿಕೆ ಹಾಗೂ ಗೌರಿ ಲಂಕೇಶ್ ಅವರ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ 10 ಸೆಕೆಂಡ್ ದೃಶ್ಯಾವಳಿ ಆಧರಿಸಿ ರೇಖಾಚಿತ್ರ ಸಿದ್ಧಪಡಿಸಲಾಗಿದೆ. ಹಂತಕರ ರೇಖಾಚಿತ್ರಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದರೆ ಆರೋಪಿಗಳ ಚಲನವಲನಗಳನ್ನು ಬೇಗ ಪತ್ತೆಹಚ್ಚಬಹುದು ಎಂಬುದು ಪೊಲೀಸರ ತಂತ್ರವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ