
ಉತ್ತರಪ್ರದೇಶ(ಮಾ.27): ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ವಿವಾದ ಸೃಷ್ಟಿಸಿದೆ.ಕಾನೂನುಬದ್ಧವಾಗಿ ನಡೆಯುತ್ತಿರುವ ಕಸಾಯಿಖಾನೆಗಳ ನಿರ್ವಹಣೆಗೆ ಯಾವುದೇ ಅಡ್ಡಿ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದರೂ ಬಹಳಷ್ಟು ಮಾಂಸದ ಅಂಗಡಿಗಳ ಮಾಲೀಕರು ಸರ್ಕಾರ ತಮ್ಮನ್ನು ಟಾರ್ಗೆಟ್ ಆಗಿಸಿಕೊಂಡಿದೆ ಎಂದು ದೂರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಲಕ್ನೋ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಾಂಸದ ವ್ಯಾಪಾರಿಗಳು ಇಂದಿನಿಂದ ಅಂಗಡಿಗಳನ್ನು ಮುಚ್ಚಿ ಅನಿರ್ಧಿಷ್ಟ ಕಾಲಾವಧಿಯ ಧರಣಿಗೆ ಕರೆ ಮುಂದಾಗಿದ್ದಾರೆ. ಲಕ್ನೋನ ಮೇಕೆ ಮಾಂಸದ ವ್ಯಾಪಾರಿಗಳು, ಮೀನು ವ್ಯಾಪಾರಿಗಳು ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಸಾಯಿಖಾನೆಗಳನ್ನು ಮುಚ್ಚಿಸುವ ಸರ್ಕಾರದ ನಿರ್ಣಯದಿಂದ ಲಕ್ಷಾಂತರ ಜನ ಉದ್ಯೋಗ ಕಳೆದುಕೊಳ್ಳುತ್ತಾರೆ ಎಂದು ಮಾಂಸ ವ್ಯಾಪಾರಿಗಳ ಸಂಘ ಆತಂಕ ವ್ಯಕ್ತಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.