ಮಂಗಳೂರಿಗೆ ರಾಜಹಂಸ, ಸ್ಲೀಪರ್‌ ಬಸ್‌ ಸಂಚಾರ ಶುರು

Published : Aug 21, 2018, 11:22 AM ISTUpdated : Sep 09, 2018, 10:10 PM IST
ಮಂಗಳೂರಿಗೆ ರಾಜಹಂಸ, ಸ್ಲೀಪರ್‌ ಬಸ್‌ ಸಂಚಾರ ಶುರು

ಸಾರಾಂಶ

ಆಸಗ್ಟ್ 14ರಿಂದ ಸ್ಥಗಿತವಾಗಿದ್ದ ಬೆಂಗಳೂರು - ಮಂಗಳೂರು ರಾಜಹಂಸ ಸ್ಲೀಪರ್ ಬಸ್ ಸಂಚಾರ ಇದೀಗ ಪುನರಾರಂಭವಾಗಿದೆ.

ಬೆಂಗಳೂರು :  ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಆ.14ರಿಂದ ಸ್ಥಗಿತಗೊಂಡಿದ್ದ ರಾಜಹಂಸ ಮತ್ತು ಸ್ಲೀಪರ್‌ ಕೋಚ್‌ ಬಸ್‌ ಸೇವೆಯನ್ನು ಕೆಎಸ್‌ಆರ್‌ಟಿಸಿ ಸೋಮವಾರದಿಂದ ಪುನರಾರಂಭಿಸಿದೆ.

ಚಾರ್ಮಾಡಿ ಘಾಟ್‌ ಮುಖಾಂತರ ಮಂಗಳೂರಿಗೆ 29 ರಾಜಹಂಸ ಮತ್ತು ಸ್ಲೀಪರ್‌ ಕೋಚ್‌ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಪ್ರಾರಂಭಿಸಿದೆ. ಜೊತೆಗೆ ಕುದುರೆಮುಖ ಮಾರ್ಗವಾಗಿ ಕುಂದಾಪುರಕ್ಕೆ ಎರಡು ಐರಾವತ ಕ್ಲಬ್‌ ಕ್ಲಾಸ್‌ ಬಸ್‌, ಕಾಸರಗೋಡು ಹೊರತುಪಡಿಸಿ ಕೇರಳಕ್ಕೆ ಬಸ್‌ ಸಂಚಾರ ಪುನರಾರಂಭಿಸಲಾಗಿದೆ. ಮಡಿಕೇರಿ ಹಾಗೂ ಕುಶಾಲನಗರ ಕಡೆಗೂ ಆ.20ರಂದು 19 ಬಸ್‌ ಕಾರ್ಯಾಚರಣೆಗೊಳಿಸಲಾಗಿದೆ.

ಆದರೆ, ಮಂಗಳೂರು, ಕುಂದಾಪುರ, ಪುತ್ತೂರು, ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ, ಶೃಂಗೇರಿ, ಉಡುಪಿ, ಧರ್ಮಸ್ಥಳ ಸೇರಿದಂತೆ ವಿವಿಧ ಸ್ಥಳಗಳಿಗೆ ಹೋಗುತ್ತಿದ್ದ 39 ಬಸ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?