ಮುಂಗಾರು ಕ್ಷೀಣ; ರೈತರಲ್ಲಿ ಮತ್ತೆ ಆತಂಕ

Published : Jun 22, 2019, 07:46 AM IST
ಮುಂಗಾರು ಕ್ಷೀಣ; ರೈತರಲ್ಲಿ ಮತ್ತೆ ಆತಂಕ

ಸಾರಾಂಶ

3-4 ದಿನದಲ್ಲಿ ಮುಂಗಾರು ಮಳೆ ಇನ್ನಷ್ಟು ಕ್ಷೀಣ?  ಮುಂಗಾರು ದುರ್ಬಲವಾಗುವ ಸಾಧ್ಯತೆ: ಕೆಎಸ್‌ಎನ್‌ಡಿಎಂಸಿ |   

 ಬೆಂಗಳೂರು (ಜೂ. 22): ರಾಜ್ಯದಲ್ಲಿ ಮೂರ್ನಾಲು ದಿನದ ಬಳಿಕ ಮತ್ತೆ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದ್ದು, ರೈತರಲ್ಲಿ ಆತಂಕ ಮೂಡಿದೆ.

ರಾಜ್ಯದಲ್ಲಿ ಇದೀಗ ಮುಂಗಾರು ಮಳೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಚುರುಕು ಕಾಣಿಸಿಕೊಂಡಿದೆ. ಜೂ.24 ವರೆಗೂ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆದರೆ, ಜೂ.24ರ ನಂತರ ಮುಂಗಾರು ಕ್ಷೀಣಿಸುವ ಲಕ್ಷಣಗಳು ಕಂಡುಬಂದಿದ್ದು, ರೈತರಲ್ಲಿ ಮತ್ತೆ ಆತಂಕ ಎದುರಾಗುವಂತಾಗಿದೆ.

ಈ ನಡುವೆ ಮುಂದಿನ ಮೂರು ದಿನ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ ಜಿಲ್ಲೆಯಲ್ಲಿ 65ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ ಚುರುಕುಗೊಂಡಿರುವ ಮುಂಗಾರಿನಿಂದ ರಾಜ್ಯಾದ್ಯಂತ ಸರಾಸರಿ 50 ಮಿ.ಮೀ.ವರೆಗೆ ಮಳೆಯಾದರೆ ಬಿತ್ತನೆ ಕಾರ್ಯಕ್ಕೆ ಅನುಕೂಲವಾಗಲಿದೆ. ಆದರೆ, ಜಲಾಶಯಗಳಿಗೆ ಒಳಹರಿವು ಬರುವ ಸಾಧ್ಯತೆ ಕಡಿಮೆ. ನಿರಂತರವಾಗಿ ಮಳೆಯಾದರೆ ಮಾತ್ರ ಜಲಾಶಯಗಳಿಗೆ ಉತ್ತಮ ಒಳಹರಿವು ಬರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?