ಹಿರಿಯ ನಾಯಕ ಎಸ್.ಎಂ. ಕೃಷ್ಣ ಮುಡಿಗೆ ಮತ್ತೊಂದು ಗೌರವ

Published : Jun 20, 2019, 09:10 AM ISTUpdated : Jun 20, 2019, 11:38 AM IST
ಹಿರಿಯ ನಾಯಕ ಎಸ್.ಎಂ. ಕೃಷ್ಣ ಮುಡಿಗೆ ಮತ್ತೊಂದು ಗೌರವ

ಸಾರಾಂಶ

ಬಿಜೆಪಿ ಹಿರಿಯ ನಾಯಕ ಎಸ್. ಎಂ ಕೃಷ್ಣ  ಮುಡಿಗೆ ಇದೀಗ ಹೊಸ ಗೌರವ ಒಲಿದ ಬಂದಿದೆ.

ಬೆಂಗಳೂರು [ಜೂ.20] :  ಜನಪ್ರತಿನಿಧಿಗಳು ವಿಧಾನಸೌಧ ಮತ್ತು ಮನೆಗಳಲ್ಲಿ ಪಾರದರ್ಶಕತೆ ಅಳವಡಿಸಿಕೊಳ್ಳುವುದು ಸಾರ್ವಜನಿಕ ದೃಷ್ಟಿಯಿಂದ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟರು. ಕಸಾಪದಲ್ಲಿ ಬುಧವಾರ ‘ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ’ ಸ್ವೀಕರಿಸಿದ ಅವರು, ಈಗ ವಿಧಾನಸೌಧದಲ್ಲಿ ಮಂತ್ರಿಗಳನ್ನು ನೋಡುವುದೇ ಅಪರೂಪವಾಗಿದೆ. ಹಾಗಾದರೆ, ವಿಧಾನಸೌಧವನ್ನು
ಕಟ್ಟಿಸಿರುವುದು ಏತಕ್ಕೆ ಎಂದು ಪ್ರಶ್ನಿಸಿದರು.

ಮಹಾನ್ ಸೌಧವಾದ ‘ವಿಧಾನಸೌಧ’ ವನ್ನು ಕಟ್ಟಿಸಿದ ಕೆಂಗಲ್ ಹನುಮಂತಯ್ಯ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ, ವಿಚಾರಣಾ ಸಮಿತಿಯನ್ನು ನೇಮಿಸಲಾಗಿತ್ತು. ಈ ಕುರಿತು ವಿಧಾನ ಸಭೆಯಲ್ಲಿ ಮಾತನಾಡಲು ನಿಂತ ಅವರು, ಈ ಭವ್ಯ ಮಂದಿರವನ್ನು ನೋಡಲು ದೇಶ ವಿದೇಶದಿಂದ ಕೋಟ್ಯಂತರ ಜನ ಬರುತ್ತಾರೆ. ಅಂತಹ ಸೌಧವನ್ನು ಕಟ್ಟಿಸಿದ ನಾನು, ಈಗ ಅದೇ ಭವ್ಯ ಮಂದಿರದಲ್ಲಿ ನಿರಪಾರಾಧಿಯೆಂದು ಹೇಳಬೇಕಾಗಿದೆ ಎಂದು ಭಾವನಾತ್ಮಕವಾಗಿ ಹೇಳಿದ್ದರು. 

ಆಗ ನನ್ನ ಕಣ್ಣಿನಲ್ಲಿ ನೀರು ಬಂದಿತ್ತು. ಕೆಂಗಲ್ ಹನುಮಂತಯ್ಯ ಅವರ ಪ್ರೇರಣೆಯಿಂದ ನನ್ನ ಅಧಿಕಾರಾವಧಿಯಲ್ಲಿ ವಿಕಾಸ ಸೌಧವನ್ನು ಕಟ್ಟಿದ್ದೇನೆ. ವಿಕಾಸಸೌಧವನ್ನು ಇನ್ನೂ ದೊಡ್ಡದಾಗಿ ಕಟ್ಟಬೇಕು ಎಂಬ ಆಸೆಯಿತ್ತು. ಅದಕ್ಕಾಗಿ, ಪಕ್ಕದ ಬೃಹತ್ ಕಟ್ಟಡವನ್ನು ಒಡೆಯಬೇಕಿತ್ತು. ಒಂದು  ವೇಳೆ ಈ ಕಟ್ಟಡವನ್ನು ಒಡೆಯಲು ಮುಂದಾಗಿದ್ದರೆ, ಅದಕ್ಕೆ ಎದುರಾಗಬಹುದಾಗಿದ್ದ ವಿರೋಧವನ್ನು ಎದುರಿಸುವ ಶಕ್ತಿ ನನ್ನಲ್ಲಿರಲಿಲ್ಲ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು