ಕಮಲಕ್ಕೆ ಕೃಷ್ಣಾಗಮನ

Published : Mar 22, 2017, 12:55 PM ISTUpdated : Apr 11, 2018, 12:38 PM IST
ಕಮಲಕ್ಕೆ ಕೃಷ್ಣಾಗಮನ

ಸಾರಾಂಶ

ಕೃಷ್ಣ ಅವರನ್ನು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪ್ರಾಥಮಿಕ ಸದಸ್ಯತ್ವ ನೀಡಿ ಬಿಜೆಪಿಗೆ ಸ್ವಾಗತಿಸಿದರು. ಕೇಂದ್ರ ಸಚಿವ ಸದಾನಂದಗೌಡ, ಸಂಸದ ಪ್ರಹ್ಲಾದ್​ ಜೋಶಿ, ಮುಖಂಡರಾದ ಆರ್. ಅಶೋಕ್,ಸಿಟಿ ರವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ನವದೆಹಲಿ(ಮಾ.22): ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೃಷ್ಣ ಅವರನ್ನು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪ್ರಾಥಮಿಕ ಸದಸ್ಯತ್ವ ನೀಡಿ ಬಿಜೆಪಿಗೆ ಸ್ವಾಗತಿಸಿದರು. ಕೇಂದ್ರ ಸಚಿವ ಸದಾನಂದಗೌಡ, ಸಂಸದ ಪ್ರಹ್ಲಾದ್​ ಜೋಶಿ, ಮುಖಂಡರಾದ ಆರ್. ಅಶೋಕ್,ಸಿಟಿ ರವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸೇರ್ಪಡೆಗೊಂಡ ನಂತರ ಮಾತನಾಡಿದ ಕೃಷ್ಣ, ಪ್ರಧಾನಿ ಮೋದಿಯವರ ಜತೆ ಉತ್ತಮ ಸಂಬಂಧವಿದೆ ಹೀಗಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ. ಅನಂತಕುಮಾರ್​ ಸೇರಿದಂತೆ ಹಲವರ ಜತೆ ಉತ್ತಮ ಬಾಂಧವ್ಯವಿದೆ. ಅಮಿತ್​ ಶಾ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವಾಜಪೇಯಿ ಸಾಧನೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಪ್ರಧಾನಿ ಮೋದಿ ಅವರು ಭಾರತವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್​ ಹೈಕಮಾಂಡ್ ಧೋರಣೆಯನ್ನು ಖಂಡಿಸಿ ಜನವರಿಯಲ್ಲಿ ಪಕ್ಷವನ್ನು ತೊರೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದು ವೈರಸ್ ಎಂಟ್ರಿ, 14 ಕೋಟಿ ರೂ ಕಳೆದುಕೊಂಡು ರ‍್ಯಾಪಿಡೋ ಚಾಲಕನಾದ ಉದ್ಯಮಿ ಕಣ್ಣೀರ ಕತೆ
ಒಂದೇ ವರ್ಷದಲ್ಲಿ 1 ಲಕ್ಷ ಮೌಲ್ಯದ ಕಾಂಡೋಮ್‌‌ ಖರೀದಿ ಮಾಡಿದ ಚೆನ್ನೈ ವ್ಯಕ್ತಿ!