ಉಪ ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಎಸ್‌ಎಂ ಕೃಷ್ಣ : ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ

Published : Apr 04, 2017, 03:49 AM ISTUpdated : Apr 11, 2018, 12:54 PM IST
ಉಪ ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಎಸ್‌ಎಂ ಕೃಷ್ಣ : ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ

ಸಾರಾಂಶ

ಬಿಜೆಪಿ ಸೇರ್ಪಡೆ ಬಳಿಕ  ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ  ಬೈಎಲೆಕ್ಷನ್ ಪ್ರಚಾರದ ಅಖಾಡಕ್ಕಿಳಿದಿದ್ದಾರೆ. ಬೆಂಗಳೂರಿನಿಂದ ನಂಜನಗೂಡಿಗೆ ಬಂದಿಳಿದ ಎಸ್.ಎಂ ಕೃಷ್ಣ, ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ, ನಾನು ಹಲವು ಸಿಎಂಗಳ ಕಂಡಿದ್ದೇನೆ, ಆದರೆ ಈ ಸರ್ಕಾರ ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಅಂತ ಸಿಎಂ ಸಿದ್ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು(ಎ.04): ಬಿಜೆಪಿ ಸೇರ್ಪಡೆ ಬಳಿಕ  ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ  ಬೈಎಲೆಕ್ಷನ್ ಪ್ರಚಾರದ ಅಖಾಡಕ್ಕಿಳಿದಿದ್ದಾರೆ. ಬೆಂಗಳೂರಿನಿಂದ ನಂಜನಗೂಡಿಗೆ ಬಂದಿಳಿದ ಎಸ್.ಎಂ ಕೃಷ್ಣ, ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ, ನಾನು ಹಲವು ಸಿಎಂಗಳ ಕಂಡಿದ್ದೇನೆ, ಆದರೆ ಈ ಸರ್ಕಾರ ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಅಂತ ಸಿಎಂ ಸಿದ್ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಲ್ಲಿಂದ ನೇರವಾಗಿ ಗುಂಡ್ಲುಪೇಟೆಯ ಬಿಜೆಪಿ ಸಮಾವೇಶಕ್ಕೆ ಕೃಷ್ಣ ಹಾಗೂ ಶ್ರೀನಿವಾಸ ಪ್ರಸಾದ್ ಒಗ್ಗೂಡಿ ಬಂದರು. ಇಲ್ಲಿ  ಸಿದ್ದರಾಮಯ್ಯನವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಶ್ರೀನಿವಾಸ ಪ್ರಸಾದ್, ಸಿದ್ದರಾಮಯ್ಯಗೆ ಅಧಿಕಾರದ ಅಮಲೇರಿದೆ, ಅದನ್ನ ಜನರೇ ಇಳಿಸಬೇಕು ಅಂದ್ರು.

ಇನ್ನೂ ಸಿಎಂ ಸಿದ್ದರಾಮಯ್ಯ ಇವತ್ತು ಗುಂಡ್ಲುಪೇಟೆ ಕ್ಷೇತ್ರದ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಅಭ್ಯರ್ಥಿ ಗೀತಾ ಮಹದೇವಪ್ರಸಾದ್ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ರು.

ಒಟ್ಟಿನಲ್ಲಿ ಚುನಾವಣೆ ಹತ್ತಿರವಾಗ್ತಿದಂತೆ ಪ್ರಚಾರದ ಭರಾಟೆ ಕೂಡ ಜೋರಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್: ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ
ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ