ಕೃಷ್ಣ ಯಾವ ಪಕ್ಷಕ್ಕೂ ಹೋಗುವುದಿಲ್ಲ: ರಾಯರೆಡ್ಡಿ

Published : Feb 03, 2017, 09:32 AM ISTUpdated : Apr 11, 2018, 01:01 PM IST
ಕೃಷ್ಣ ಯಾವ ಪಕ್ಷಕ್ಕೂ ಹೋಗುವುದಿಲ್ಲ: ರಾಯರೆಡ್ಡಿ

ಸಾರಾಂಶ

ಜನಾರ್ಧನ ಪೂಜಾರಿ ಅವರು ಅನಾಗರಿಕ ಭಾಷೆಯನ್ನು ಮಾತನಾಡುತ್ತಿದ್ದು, ಇದು ಅವರ ಹಿರಿತನಕ್ಕೆ ಸರಿಯಲ್ಲ ಎಂದು ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳ (ಫೆ.03): ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಯಾವುದೇ ಕಾರಣಕ್ಕೂ ಬೇರೆ ಪಕ್ಪಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ಎಸ್.ಎಂ. ಕೃಷ್ಣ ಒಬ್ಬ ಗೌರವಾನ್ವಿತ ವ್ಯಕ್ತಿ, ಅವರನ್ನು ನಿರ್ಲಕ್ಷ ಮಾಡಲಾಗಿದೆ ಎಂದು ರಾಜೀನಾಮೆ ನೀಡಿದ್ದಾರೆ. ವಯಸ್ಸಿಗನುಗುಣವಾಗಿ ಸಮಸ್ಯೆಗಳು ಬರುತ್ತವೆ. ಅಧಿಕಾರ ಇರದಿದ್ದಾಗ ಜನರು ಬರುವುದಿಲ್ಲ, ಹೀಗಾಗಿ ಅವರಿಗೆ ಸಮಸ್ಯೆಯಾಗಿ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ.

ಕೃಷ್ಣ ಹಿರಿಯರು, ಪಕ್ಷದ ವರಿಷ್ಠರು ಹಾಗೂ ನಾನು ಅವರನ್ನು ಭೇಟಿ ಮಾಡಿ ಮನವೊಲಿಸುತ್ತೇವೆ ಎಂದಿದ್ದಾರೆ.

 ಜನಾರ್ಧನ ಪೂಜಾರಿ, ಜಾಫರ್ ಷರೀಫ್ ಮುಖ್ಯಮಂತ್ರಿಗಳ ಬಗ್ಗೆ ಬಹಳ ಹಗುರವಾಗಿ ಮಾಡನಾಡುತ್ತಿದ್ದಾರೆ. ಜಾಫರ್ ಷರೀಫ್ ಅವರಿಗೆ ಮುಖ್ಯಮಂತ್ರಿಯವರು ಸಾಕಷ್ಟು ಅವಕಾಶಗಳನ್ನು ನೀಡಿದ್ದಾರೆ, ಎಂದಿದ್ದಾರೆ. 

ಜನಾರ್ಧನ ಪೂಜಾರಿ ಅವರು ಅನಾಗರಿಕ ಭಾಷೆಯನ್ನು ಮಾತನಾಡುತ್ತಿದ್ದು, ಇದು ಅವರ ಹಿರಿತನಕ್ಕೆ ಸರಿಯಲ್ಲ ಎಂದು ರಾಯರೆಡ್ಡಿ ಹೇಳಿದ್ದಾರೆ.

ಇನ್ನು ಕಳೆದ ಎರಡು ದಿನಗಳ ಹಿಂದೆ ಬಸ್ ಅಪಘಾತದಲ್ಲಿ ಮೃತಪಟ್ಟ ಬಾಲಕ ಅನ್ವರ್ ಅಲಿ ಕುಟುಂಬಕ್ಕೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ 1 ಲಕ್ಷ ಪರಿಹಾರ ಕೊಡಿಸುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಾಕಿಸ್ತಾನಕ್ಕೆ ನೌಕಾಪಡೆ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ: ಉಡುಪಿಯಲ್ಲಿ ಗುಜರಾತ್ ಮೂಲದ ಮತ್ತೊಬ್ಬ ಆರೋಪಿ ಬಂಧನ
ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ