
ಮುಂಬೈ(ಜೂ.28): ಮುಂಬೈನ ವಸತಿ ಪ್ರದೇಶದಲ್ಲಿ ಲಘು ವಿಮಾನವೊಂದು ಪತನಗೊಂಡಿದ್ದು, ಐವರು ಸಜೀವ ದಹನಗೊಂಡಿದ್ದಾರೆ. ಮುಂಬೈನ ಘಾಟ್ ಕೋಪರ್ ಬಳಿಯ ಸರ್ವೋದಯ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಬಳಿ ವಿಮಾನ ಪತನಗೊಂಡಿದೆ.
ವಿಮಾನದಲ್ಲಿದ್ದ ಮುಖ್ಯ ಪೈಲಟ್ ಪಿಎಸ್ ರಜಪೂತ್, ಕೋ ಪೈಲಟ್ ಮಾರಿಯಾ ಝುಬೇರಿ, ಇಂಜಿನಿಯರ್ ಸುರ್ಬಿ ಮತ್ತು ಟೆಕ್ನಿಷನ್ ಮನೀಶ್ ಪಾಂಡೆ ಹಾಗೂ ಓರ್ವ ಸ್ಧಳೀಯ ವ್ಯಕ್ತಿ ಸೇರಿ ಐವರು ಸಜೀವ ದಹನವಾಗಿದ್ದಾರೆ.
ಕಿಂಗ್ ಏರ್ ಸಿ90 ಚಾರ್ಟರ್ಡ್ ವಿಮಾನ ಉತ್ತರಪ್ರದೇಶ ಸರ್ಕಾರದ್ದು ಎಂದು ಈ ಮೊದಲು ಹೇಳಲಾಗಿತ್ತು. ಆದರೆ ವಿಮಾನ ಪತನ ನಂತರ ಇದೀಗ ಉತ್ತರಪ್ರದೇಶ ಸರ್ಕಾರ ಹಿಂದೆಯೇ ಈ ವಿಮಾನವನ್ನು ಮಾರಾಟ ಮಾಡಿತ್ತು ಎಂಬುದು ಗೊತ್ತಾಗಿದೆ.
ವಿಮಾನ ಪತನದಿಂದ ಕಟ್ಟಡಕ್ಕೂ ಬೆಂಕಿ ತಲುಗಿದ್ದು ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.