ಆರೋಪ ಪ್ರಕರಣದ ತನಿಖೆಯ ತಡೆಯಾಜ್ಞೆ ಮುಂದುವರಿಕೆ : ಎಸ್ಎಂ, ಹೆಚ್ಡಿಕೆ ನಿರಾಳ

Published : Nov 16, 2016, 04:41 PM ISTUpdated : Apr 11, 2018, 12:53 PM IST
ಆರೋಪ ಪ್ರಕರಣದ ತನಿಖೆಯ ತಡೆಯಾಜ್ಞೆ ಮುಂದುವರಿಕೆ : ಎಸ್ಎಂ, ಹೆಚ್ಡಿಕೆ ನಿರಾಳ

ಸಾರಾಂಶ

ಮಾಜಿ ಸಿಎಂಗಳಾದ ಎಸ್ ಎಂ ಕೃಷ್ಣ , ಹೆಚ್.ಡಿ ಕುಮಾರಸ್ವಾಮಿ, ಧರಂ ಸಿಂಗ್ ಹಾಗೂ ಐಎಎಸ್ ಅಧಿಕಾರಿಗಳಾದ ಅಶ್ವಥ್, ಕೆ.ಶ್ರೀನಿವಾಸ್ ಸೇರಿ ೧೪ ಮಂದಿ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಕುರಿತು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರ ವಿರುದ್ಧದ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಮುಂದುವರಿಸಿದೆ. ಹೀಗಾಗಿ ಈ ಇಬ್ಬರು ನಾಯಕರು ಮತ್ತೊಮ್ಮೆ ನಿರಾಳರಾಗಿದ್ದಾರೆ.

ಮಾಜಿ ಸಿಎಂಗಳಾದ ಎಸ್ ಎಂ ಕೃಷ್ಣ , ಹೆಚ್.ಡಿ ಕುಮಾರಸ್ವಾಮಿ, ಧರಂ ಸಿಂಗ್ ಹಾಗೂ ಐಎಎಸ್ ಅಧಿಕಾರಿಗಳಾದ ಅಶ್ವಥ್, ಕೆ.ಶ್ರೀನಿವಾಸ್ ಸೇರಿ ೧೪ ಮಂದಿ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಕುರಿತು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ಎಸ್. ಎಂ. ಕೃಷ್ಣ, ಕುಮಾರಸ್ವಾಮಿ ಹಾಗೂ ಐಎಎಸ್ ಅಧಿಕಾರಿಗಳಾದ ಅಶ್ವಥ್, ಕೆ ಶ್ರೀನಿವಾಸ್ ಮೂರ್ತಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಈ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಹಾಗೂ ಇತರೆ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿರಲಿಲ್ಲ.

ಹೀಗಾಗಿ ಎಸ್. ಎಂ. ಕೃಷ್ಣ, ಹಾಗೂ ಹೆಚ್. ಡಿ. ಕುಮಾರಸ್ವಾಮಿ ಸೇರಿ ನಾಲ್ವರ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಮುಂದುವರಿಸಿದೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಸೇರಿ ಇತರೆ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರಿಸಲು ಸುಪ್ರೀಂಕೋರ್ಟ್ ಆದೇಶಿಸಿ ವಿಚಾರಣೆಯನ್ನು ಜನವರಿ ೨ನೇ ವಾರಕ್ಕೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?