
ಬೆಂಗಳೂರು (ಜ.29): ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಿಎಂ ಎಸ್.ಎಂ..ಕೃಷ್ಣ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಕೃಷ್ಣರ ನಿರ್ಧಾರ ಪಕ್ಷಕ್ಕೆ ಹೊಡೆತ ನೀಡಲಿದೆ. ಪಕ್ಷದಲ್ಲಿ ಅವರಿಗೆ ಎಲ್ಲಾ ಸ್ಥಾನಮಾನಗಳು ಸಿಕ್ಕಿವೆ ಎಂದು ಹೇಳಿದ್ದಾರೆ. ಕೆಲವೊಂದು ವಿಚಾರಗಳಲ್ಲಿ ಅಸಮಾಧಾನವಿರಬಹುದು. ಅವರ ಅಸಮಾಧಾನದ ಬಗ್ಗೆ ಸಿಎಂಗೆ ಗೊತ್ತಿರಬಹುದು. ಹೈಕಮಾಂಡ್ ಈಗಾಗಲೇ ಮನವೊಲಿಸುವ ಕೆಲಸ ಮಾಡುತ್ತಿದೆ. ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನಿರ್ಧಾರ ಕೈಬಿಡಬೇಕೆಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕೊಡಗಿನಲ್ಲಿ ಪ್ರತಿಕ್ರಿಯಿಸಿದ ಡಿ.ವಿ.ಸದಾನಂದಗೌಡ, ದೇಶದ ಒಳಿತಿಗಾಗಿ ಅವರು ಪಕ್ಷದ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ಬಂದರೆ ಖಂಡಿತ ಸ್ವಾಗತಾರ್ಹ. ಅವರ ಮನಸ್ಸಿಗೆ ಕಾಂಗ್ರೆಸ್ ಪಕ್ಷದಿಂದ ನೋವಾಗಿದೆ. ಕಾಂಗ್ರೆಸ್’ನಿಂದ ಹೊರಗೆ ಬಂದಿದ್ದು ಸಂತಸ ತಂದಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.