
ನವದೆಹಲಿ(ಡಿ.19): ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್, ಇದೀಗ ಮತ್ತಷ್ಟು ಚುರುಕಾಗಿದೆ.
ಮೂರು ರಾಜ್ಯಗಳಲ್ಲಿ ಸರ್ಕಾರ ರಚನೆಯಾದ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ಭಾಷಣ ಶೈಲಿ ಬದಲಾಗಿರುವುದು ನಿಜ. ಹಿಂದೆಂದಿಗಿಂತಲೂ ಹೆಚ್ಚಾಗಿ ರಾಹುಲ್ ಇದೀಗ ಪ್ರಧಾನಿ ನರೇಂದ್ರ ಮೋದಿ ಮೇಲೆ ಹರಿಹಾಯುತ್ತಿದ್ದಾರೆ.
ಈ ಮಧ್ಯೆ ಸಂಸತ್ತಿನ ಹೊರಗೆ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಮಾತನಾಡುವ ಸಂದರ್ಭದಲ್ಲಿ, ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್ ಮತ್ತು ಜ್ಯೋತಿರಾಧಿತ್ಯ ಸಿಂಧಿಯಾ ರಾಹುಲ್ ಗೆ ಏನು ಮಾತನಾಡಬೇಕು ಎಂಬ ಕುರಿತು ಸಲಹೆ ನೀಡುತ್ತಿರುವುದು ರೆಕಾರ್ಡ್ ಆಗಿದೆ.
ರೈತರ ಸಾಲಮನ್ನಾ ಕುರಿತಂತೆ ಮಾತನಾಡುವ ಸಂದರ್ಭದಲ್ಲಿ, ‘ಪಿಎಂ ಮೋದಿ ಮಾಡಲಾರದ್ದನ್ನು ನಾನು ಮಾಡಿ ತೋರಿಸಿದ್ದೇನೆ’ ಎಂದು ಹೇಳುವಂತೆ ಸಿಂಧಿಯಾ ಸಲಹೆ ನೀಡುತ್ತಿರುವುದು ಮಾಧ್ಯಮಗಳ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.
ಈ ವೀಡಿಯೋವನ್ನು ಬಳಸಿಕೊಂಡು ಕಾಂಗ್ರೆಸ್ಗೆ ಮುಜುಗರ ತರಲು ಬಿಜೆಪಿ ಮುಂದಾಗಿದೆ. ಬಿಜೆಪಿ ನಾಯಕಿ ಸ್ಮೃತಿ ಇರಾನಿ ಈ ಕುರಿತು ಟ್ವೀಟ್ ಮಾಡಿದ್ದು, 'ಇತ್ತೀಚೆಗೆ ಕನಸು ಕಾಣುವುದಕ್ಕೂ ನಿಮಗೆ ಟ್ಯೂಷನ್ ಬೇಕಾಗಿದೆ' ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಸ್ಮೃತಿ ಇರಾನಿ ವಿಡಿಯೋಗೆ ಪ್ರತ್ಯುತ್ತರ ನೀಡಿರುವ ಕಾಂಗ್ರೆಸ್ ವಕ್ತಾರೆ ಪ್ರಿಯಾಂಕ ಚತುರ್ವೇದಿ, ‘ನೀವು ಪ್ರಧಾನಿ ಮೋದಿ ಅವರಿಗೆ ಕನಿಷ್ಠ ಒಂದಾದರೂ ಸುದ್ದಿಗೋಷ್ಠಿ ನಡೆಸಲು ಹೇಳಿ, ಟ್ಯೂಷನ್ ಸಹಾಐ ಇಲ್ಲದೇ ಮೋದಿ ಮಾತಾಡಲಿ ಎಂದು ಕಾಲೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.