
ಅಮೇಠಿ[]ಮೇ.25]: ಉತ್ತರ ಪ್ರದೇಶದ ಅಮೇಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದು ಈ ಬಾರಿಯ ಲೋಕಸಭೆ ಚುನಾವಣೆಯ ಅಚ್ಚರಿಯ ಫಲಿತಾಂಶಗಳಲ್ಲಿ ಒಂದು. ಮಾಧ್ಯಮಗಳಿಗೆ ನೀಡಿದ ಸಂದರ್ಶನ ವೇಳೆ ಸ್ಮೃತಿ ಇರಾನಿ, ತಮ್ಮ ಗೆಲುವಿನ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.
- ಕಳೆದ ಬಾರಿ ಸೋಲಿನ ಬೆನ್ನಲ್ಲೇ, 2019ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ
- ಕಾರ್ಯಕರ್ತರ ಪಡೆ ಸಿದ್ಧಪಟಿಸಿ ಸಂಘಟನಾತ್ಮಕವಾಗಿ ಚು. ತಂತ್ರ ರೂಪಿಸಲಾಗಿತ್ತು.
- ಅಮೇಠಿಯಲ್ಲೇ ಉಳಿದು ಸ್ಥಳೀಯರೊಂದಿಗೆ ಸಂವಾದದ ಮೂಲಕ ಜನರಿಗೆ ಹತ್ತಿರದ ಯತ್ನ
- ಗಾಂಧಿ ಅಮೇಠಿಯಲ್ಲಿ ಗೈರಾಗಿರುವುದನ್ನೇ ತಮ್ಮ ಚುನಾವಣಾ ಅಸ್ತ್ರವಾಗಿ ಬಳಕೆ
- ವಯನಾಡಿಂದ ಸ್ಪರ್ಧಿಸಿದಾಗ ರಾಹುಲ್ ಹೋರಾಟದಿಂದ ಓಡಿ ಹೋಗುತ್ತಿದ್ದಾರೆ ಎಂದು ಪ್ರಚಾರ
ಅಮೇಠಿ ಜನತೆ ಧನ್ಯವಾದ
ಉತ್ತರ ಪ್ರದೇಶದ ಅಮೇಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತಮ್ಮನ್ನು ಗೆಲ್ಲಿಸಿದ ಜನತೆಗೆ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಧನ್ಯವಾದ ಅರ್ಪಿಸಿದ್ದಾರೆ.ಅಮೇಠಿ ಜನತೆಗೆ ಧನ್ಯವಾದಗಳು. ನೀವು ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ಕಮಲ ಅರಳಲು ಸಹಾಯ ಮಾಡಿದ್ದೀರಿ’ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.