
ನವದೆಹಲಿ (ಅ.01): ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ತಮ್ಮ ಶೈಕ್ಷಣಿಕ ಅರ್ಹತೆ ಬಗ್ಗೆ ನಕಲಿ ದಾಖಲೆ ನೀಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಪ್ರಕರಣವನ್ನು ಪಟಿಯಾಲಾ ಹೌಸ್ ನ್ಯಾಯಾಲಯ ಅ.6 ರಂದು ವಿಚಾರಣೆ ನಡೆಸಲಿದೆ.
ಚುನಾವಣೆಗೆ ಸ್ಪರ್ಧಿಸುವ ವೇಳೆ ಸ್ಮೃತಿ ಇರಾನಿ ತಮ್ಮ ಶೈಕ್ಷಣಿಕ ಅರ್ಹತೆಯ ಅಫಿಡವಿಟ್ಟನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು.
ಸ್ಮೃತಿ ಇರಾನಿ ಚುನಾವಣಾ ಆಯೋಗಕ್ಕೆ ನಕಲಿ ದಾಖಲೆಯನ್ನು ನೀಡಿದ್ದಾರೆ ಎಂದು ಪತ್ರಕರ್ತ ಅಹ್ಮದ್ ಖಾನ್ ಇವರ ಮೇಲೆ ಪ್ರಕರಣ ದಾಖಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.