ಹಾವು ಕಡಿದ ವ್ಯಕ್ತಿಯ 2.5 ಕಿ.ಮಿ ಹೊತ್ತು ಸಾಹಸ ಮೆರೆದ ಯೋಧರು!

Published : Aug 19, 2019, 10:04 AM IST
ಹಾವು ಕಡಿದ ವ್ಯಕ್ತಿಯ 2.5 ಕಿ.ಮಿ ಹೊತ್ತು ಸಾಹಸ ಮೆರೆದ ಯೋಧರು!

ಸಾರಾಂಶ

ಛತ್ತೀಸ್‌ಗಢದ ಪುಸ್‌ಕುಂತಾ ಎಂಬಲ್ಲಿ ಹಾವು ಕಡಿದು ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿ| ಹಾವು ಕಡಿದ ವ್ಯಕ್ತಿಯ 2.5 ಕಿ.ಮಿ ಹೊತ್ತು ಸಾಹಸ ಮೆರೆದ ಯೋಧರು| 

ಛತ್ತೀಸ್‌ಗಢ[ಆ.19]: ಹಾವು ಕಡಿತಕ್ಕೊಳಗಾಗಿದ್ದ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬನನ್ನು ಬರೋಬ್ಬರಿ 2.5 ಕಿ.ಮಿ ಹೊತ್ತುಕೊಂಡೇ ಸಾಗುವ ಮೂಲಕ ಯೋಧರು ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಛತ್ತೀಸ್‌ಗಢದ ಪುಸ್‌ಕುಂತಾ ಎಂಬಲ್ಲಿ ಹಾವು ಕಡಿದು ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಯೊಬ್ಬನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕೊಂಡೊಯ್ಯಲು ಆ್ಯಂಬುಲೆನ್ಸ್‌ ಕರೆಸಲಾಗಿತ್ತು. ಅತಿಯಾದ ಮಳೆಯಿಂದಾಗಿ ರಸ್ತೆ ಹಾಳಾಗಿದ್ದರಿಂದ ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್‌ ಬರಲು ಸಾಧ್ಯವಾಗದೇ ಹೋದಾಗ ಸಿಆರ್‌ಪಿಎಫ್‌ ಯೋಧರು ಗಾಯಾಳುವನ್ನು ಕುರ್ಚಿ ಮೇಲೆ ಕೂರಿಸಿ, ಅದನ್ನು 2 ಮರದ ತುಂಡುಗಳಿಗೆ ಕಟ್ಟಿ, ಅದನ್ನು ಸುಮಾರು 2.5 ಕಿ.ಮೀ ಹೊತ್ತುಕೊಂಡು ಆ್ಯಂಬುಲೆನ್ಸ್‌ ಇರುವಲ್ಲಿಗೆ ತಲುಪಿಸಿದ್ದಾರೆ.

ರಾಯ್‌ಗಢ, ಪುಸ್‌ಕುಂಟಾ ಹಾಗೂ ಬಾಹೇಗುಡದಲ್ಲಿ ಯೋಧರು ಗಸ್ತು ತಿರುಗುತ್ತೊರುವ ವೇಳೆ ಈ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!