
ಗಾಂಧಿನಗರ [ಜು.17] : ಇಲ್ಲಿನ ಮಹಿಶ್ ಗರ್ ಪ್ರದೇಶದಲ್ಲಿ ವ್ಯಕ್ತಿಯೋರ್ವ ಹಾವು ಕಡಿತದಿಂದ ಸಾವಿಗಾಡಿದ್ದು, ಸಾಯುವ ಮುನ್ನ ಹಾವನ್ನೂ ಕಡಿದು ಸಾಯಿಸಿದ್ದಾನೆ.
ಶನಿವಾರ ಮಧ್ಯಾಹ್ನದ ವೇಳೆ ವಡೋದರದಿಂದ 120 ಕಿ.ಮೀ ದೂರದಲ್ಲಿರುವ ಅಜನ್ವಾಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.
ಪರ್ವತ್ ಗಾಲಾ ಬರಿಯಾ ಹೊಲದಲ್ಲಿ ನಿಂತಿದ್ದ ವೇಳೆ ಸ್ಥಳದಲ್ಲಿಯೇ ಇದ್ದ ಹಾವೊಂದು ಕಡಿದಿದೆ. ಬಳಿಕ ಅದನ್ನು ಹಿಡಿದು ತಿರುಗಿ ಕಡಿದು ಸಾಯಿಸಿದ್ದಾನೆ.
ಈ ವೇಳೆ ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಒಂದು ದಿನದ ಬಳಿಕ ಮೃತಪಟ್ಟಿದ್ದಾನೆ. ಈ ಸಂಬಂಧ ಅಜನ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.