
ಶಿವಮೊಗ್ಗ (ಮೇ. 06): ಚುನಾವಣಾ ತನಿಖಾ ಠಾಣೆಯ ಬಳಿ ತಪಾಸಣೆ ವೇಳೆ ಬಸ್ಸಿನಲ್ಲಿ ಎರಡು ತಲೆಯ ಹಾವು ಪತ್ತೆಯಾಗಿರುವ ಘಟನೆ ಶಿಕಾರಿಪುರ ತಾಲೂಕಿನ ತೊಗರ್ಸಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ಕೆಎಸ್’ಆರ್’ಟಿಸಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಿದಾಗ ಎರಡು ತಲೆಯ ಬೃಹದಾಕಾರದ ಹಾವು ಪತ್ತೆಯಾಗಿದೆ. ಬೆಲೆಬಾಳುವ ಹಾವನ್ನು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದರು. ಬೆಂಗಳೂರು ಮತ್ತಿಕೆರೆಯ ಮಂಜುನಾಥ , ಅನೆಕಲ್ಲಿನ ಉಮಾಪತಿಯನ್ನು ಬಂಧಿಸಲಾಗಿದೆ. ಹಾವನ್ನು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.