ಎಸ್’ಎನ್’ಸಿ ಲ್ಯಾವೆಲಿನ್ ಭ್ರಷ್ಟಾಚಾರ ಪ್ರಕರಣದಿಂದ ಪಿನರಾಯಿ ವಿಜಯನ್ ಖುಲಾಸೆ

Published : Aug 23, 2017, 04:09 PM ISTUpdated : Apr 11, 2018, 01:06 PM IST
ಎಸ್’ಎನ್’ಸಿ ಲ್ಯಾವೆಲಿನ್ ಭ್ರಷ್ಟಾಚಾರ ಪ್ರಕರಣದಿಂದ ಪಿನರಾಯಿ ವಿಜಯನ್  ಖುಲಾಸೆ

ಸಾರಾಂಶ

ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್’ಗೆ ಬಿಗ್ ರಿಲೀಫ್ ಸಿಕ್ಕಿದೆ. ಎಸ್’ಎನ್’ಸಿ ಲ್ಯಾವೆಲಿನ್ ಭ್ರಷ್ಟಾಚಾರ ಪ್ರಕರಣದಲ್ಲಿ ಪಿನರಾಯಿ ವಿಜಯನ್’ಗೆ ಕೇರಳ ಹೈಕೋರ್ಟ್ ಖುಲಾಸೆ ಮಾಡಿದೆ.

ತಿರುವನಂತಪುರಂ (ಆ.23): ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್’ಗೆ ಬಿಗ್ ರಿಲೀಫ್ ಸಿಕ್ಕಿದೆ. ಎಸ್’ಎನ್’ಸಿ ಲ್ಯಾವೆಲಿನ್ ಭ್ರಷ್ಟಾಚಾರ ಪ್ರಕರಣದಲ್ಲಿ ಪಿನರಾಯಿ ವಿಜಯನ್’ಗೆ ಕೇರಳ ಹೈಕೋರ್ಟ್ ಖುಲಾಸೆ ಮಾಡಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಎಸ್’ಎನ್’ಸಿ ಲ್ಯಾವೆಲಿನ್ ಭ್ರಷ್ಟಾಚಾರ ಪ್ರಕರಣದಲ್ಲಿ ಪಿನರಾಯಿ ವಿಜಯನ್ ವಿರುದ್ಧ ಯಾವುದೇ ಸಾಕ್ಷಾಧಾರಗಳಿಲ್ಲ.   ಅನೇಕ ಸಚಿವರು ಇದರಲ್ಲಿ ಭಾಗಿಯಾಗಿದ್ದಾರೆ ಆದರೆ ಸಿಬಿಐ ವಿಜಯನ್ ಮೇಲೆ ಮಾತ್ರ ಆರೋಪ ಹೊರಿಸಿದೆ ಎಂದು ಹೈಕೋರ್ಟ್ ಹೇಳಿದೆ.

1995 ರಲ್ಲಿ ವಿಜಯನ್ ರಾಜ್ಯದ ಧನ ಸಚಿವರಾಗಿದ್ದರು. ಪಲ್ಲಿವಾಸಲ್, ಶೆಂಕುಲಾಮ್ ಮತ್ತು ಪನ್ನಿಯಾರ್’ನಲ್ಲಿ ನಲ್ಲಿ ಹೈಡ್ರೋ ಪವರ್ ಪ್ರಾಜೆಕ್ಟ್ ನಿರ್ಮಿಸಲು ಕೆನಡಾ ಮೂಲದ ಎಸ್’ಎನ್’ಸಿ ಲ್ಯಾವೆಲಿನ್ ಕಂಪನಿಯಿಂದ 374 ಕೋಟಿ ರೂ ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

ಇಂದು ವಿಜಯನ್ ಅವರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!
'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!