ಉಲ್ಟಾ ಆಯ್ತು ಲೆಕ್ಕಾಚಾರ : ಜೆಡಿಎಸ್’ಗೆ ಗುಡ್ ಬೈ ಹೇಳ್ತಾರ ಈ ಪ್ರಭಾವಿ ಮುಖಂಡರು

By Suvarna Web DeskFirst Published Apr 5, 2018, 12:42 PM IST
Highlights

ಇದೀಗ ಜೆಡಿಎಸ್ ಮುಖಂಡರ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದೆ.  ಚುನಾವಣೆ  ಘೋಷಣೆ ಬಳಿಕ ಅಚ್ಚರಿಯ ಬೆಳವಣಿಗೆಗೆ ಕಾದಿದ್ದ  ಜೆಡಿಎಸ್’ಗೆ ನಿರಾಸೆಯಾಗಿದೆ.

ಬೆಂಗಳೂರು :  ಇದೀಗ ಜೆಡಿಎಸ್ ಮುಖಂಡರ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದೆ.  ಚುನಾವಣೆ  ಘೋಷಣೆ ಬಳಿಕ ಅಚ್ಚರಿಯ ಬೆಳವಣಿಗೆಗೆ ಕಾದಿದ್ದ  ಜೆಡಿಎಸ್’ಗೆ ನಿರಾಸೆಯಾಗಿದೆ.

ಅನೇಕ ಘಟಾನುಘಟಿ ನಾಯಕರು ಜೆಡಿಎಸ್ ಸೇರುತ್ತಾರೆ ಎಂದು ಕಾದಿತ್ತು. ಆದರೆ ಇದೀಗ ಪಕ್ಷಕ್ಕೆ ಬರುವವರಿಗಿಂತ  ಹೋಗುವವರ ಸಂಖ್ಯೆಯೇ ಕೂಡ ಹೆಚ್ಚಾಗಿದೆ. 

ಸತೀಶ್ ಜಾರಕಿಹೊಳಿ, ಸಿಎಂ ಇಬ್ರಾಹಿಂ, ಅಂಬರೀಶ್, ಜಿಎ ಬಾವಾ ಸೇರಿದಂತೆ ಹಲವು ಮುಖಂಡರು  ಜೆಡಿಎಸ್’ಗೆ ಬರುವ ನಿರೀಕ್ಷೆ ಇತ್ತು. ಈ ಬಗ್ಗೆ ಪ್ರಮುಖರೊಂದಿಗೆ ಚರ್ಚೆಯೂ ಕೂಡ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ನಿರ್ಣಯ ಬದಲಾಯಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಬಿಟ್ಟು ಬರಲು ಹಿಂದೇಟು ಹಾಕಿದ್ದಾರೆ.

ಇನ್ನು ಕಾಂಗ್ರೆಸ್ ಬಿಟ್ಟು ಬಂದಿದ್ದ ನಡಹಳ್ಳಿ, ಮಾಜಿ ಸಚಿವ ಆಲ್ಕೋಡ್ ಹಲುಮಂತಪ್ಪ ಪಕ್ಷದ ವಿಮುಖ ರಾಜಕೀಯದಿಂದ ಕಂಗಾಲಾಗಿದ್ದಾರೆ.  ಪಕ್ಷದ ನಾಯಕರು ಪಕ್ಷದಲ್ಲಿ ಇರುವವರನ್ನೇ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇನ್ನು ಕೆಲ ಪ್ರಮುಖರು ಜೆಡಿಎಸ್’ಗೆ ಗುಡ್ ಬೈ ಹೇಳುವ ಚಿಂತನೆಯಲ್ಲಿದ್ದಾರೆ.

click me!