
ಬೆಂಗಳೂರು [ಜೂ.15] : ಕಡಿಮೆ ವೇತನದಿಂದ ಜೀವನ ನಿರ್ವಹಣೆ ಸಾಧ್ಯವಾಗದೆ ಬೇಸತ್ತು ಯುವ ಸಾಫ್ಟ್ವೇರ್ ಉದ್ಯೋಗಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಿರುಮಲಾ ರೆಡ್ಡಿ (27) ಮೃತ ಯುವಕ. ತಿರುಮಲಾ ರೆಡ್ಡಿ ಕೆಲ ತಿಂಗಳ ಹಿಂದೆ ನಗರಕ್ಕೆ ಬಂದಿದ್ದು, ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದರು. ಹೊಸದಾಗಿ ಕೆಲಸಕ್ಕೆ ಸೇರಿದ್ದ ಹಿನ್ನೆಲೆಯಲ್ಲಿ ತಿರುಮಲಾ ರೆಡ್ಡಿ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಅಲ್ಲದೆ, ಆಂಧ್ರದಲ್ಲಿರುವ ತನ್ನ ಕುಟುಂಬ ಸಾಕಷ್ಟುತೊಂದರೆಯಲ್ಲಿತ್ತು. ಕುಟುಂಬಕ್ಕೆ ಹಣ ಕಳುಹಿಸಲು ಆಗದೆ ತಿರುಮಲಾ ರೆಡ್ಡಿ ನೊಂದಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ಡೆತ್ನೋಟ್: ತಾನು ಕೆಲಸ ಮಾಡುತ್ತಿರುವ ಕಂಪನಿಯಲ್ಲಿ ಕಡಿಮೆ ವೇತನ ಇದೆ. ಹೀಗಾಗಿ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ತಿರುಮಲ ರೆಡ್ಡಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.