ಬಿಜೆಪಿಯಲ್ಲಿ ಅಪಸ್ವರ: ದುಡ್ಡು ಕೊಟ್ಟು ಜನರನ್ನು ರ್ಯಾಲಿಗೆ ಕರೆತರುತ್ತಾರೆ; ಸೊಗಡು ಶಿವಣ್ಣ ಟೀಕೆ

Published : Nov 05, 2017, 01:17 PM ISTUpdated : Apr 11, 2018, 12:39 PM IST
ಬಿಜೆಪಿಯಲ್ಲಿ ಅಪಸ್ವರ: ದುಡ್ಡು ಕೊಟ್ಟು ಜನರನ್ನು ರ್ಯಾಲಿಗೆ ಕರೆತರುತ್ತಾರೆ; ಸೊಗಡು ಶಿವಣ್ಣ ಟೀಕೆ

ಸಾರಾಂಶ

* ಬಿಜೆಪಿಯ ಪರಿವರ್ತನಾ ಯಾತ್ರೆಗೆ ಪಕ್ಷದಲ್ಲೇ ಅಪಸ್ವರ * ಬಿಜೆಪಿ ಪರಿವರ್ತನಾ ಅಲ್ಲ, ಕೆಜೆಪಿ ಯಾತ್ರೆ: ಸೊಗಡು ಶಿವಣ್ಣ * ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಸೊಗಡು ಸಿಡಿಮಿಡಿ * ತುಮಕೂರು ಬಿಜೆಪಿ ಅಪ್ಪ ಮಕ್ಕಳ ಪಾರ್ಟಿಯಾಗಿದೆ - ಶಿವಣ್ಣ * ತುಮಕೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿ ವಿಫಲ: ಶಿವಣ್ಣ

ತುಮಕೂರು(ನ. 05): ಬಿಜೆಪಿ ಪರಿವರ್ತನಾ ರ್ಯಾಲಿಗೆ ಆರಂಭದಲ್ಲೇ ಅಪಸ್ವರ ಕೇಳಿ ಬಂದಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಪಕ್ಷದ ಮುಖಂಡರ ವಿರುದ್ಧ ಹರಿಹಾಯ್ದಿದ್ದಾರೆ. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ತುಮಕೂರಿನಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿಗೆ ಹಣಕೊಟ್ಟು ಜನರನ್ನು ಕರೆದುಕೊಂಡು ಬರಲಾಗಿದೆ ಎಂದು ಆರೋಪಿಸಿದ್ದಾರೆ.

"ಯಡಿಯೂರಪ್ಪ ನೇತೃತ್ವದ ಬಿಜೆಪಿ ಪರಿವರ್ತನಾ ರ್ಯಾಲಿ ಸಂಪೂಣ ವಿಫಲವಾಗಿದೆ. ಯಾತ್ರೆಯಲ್ಲಿ ಪಾಲ್ಗೊಂಡವರು ಬಿಜೆಪಿ ಕಾರ್ಯಕರ್ತರಲ್ಲ, ಕೆಲಸಗಾರರು. ಐನ್ನೂರು, ಸಾವಿರ ರೂಪಾಯಿ ಹಣ ಕೊಟ್ಟು ಜನರನ್ನು ಕರೆದುಕೊಂಡು ಬರಲಾಗಿದೆ," ಎಂದು ಸೊಗಡು ಶಿವಣ್ಣ ಟೀಕಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಅಪ್ಪ ಮಕ್ಕಳ ಪಕ್ಷವಾಗಿ ಮಾರ್ಪಟ್ಟಿದೆ. ಇಲ್ಲಿ ಅಪ್ಪ-ಮಕ್ಕಳ ಸೇಡು ಅತಿಯಾಗಿದೆ. ಮೂಲ ಕಾರ್ಯಕರ್ತರಿಗೆ ಬೆಲೆ ನೀಡುತ್ತಿಲ್ಲ. ಕೆಜೆಪಿ ಮತ್ತು ಬಿಜೆಪಿ ಎಂದು ವಿಘಟನೆ ಮಾಡಲಾಗುತ್ತಿದೆ. ಯಡಿಯೂರಪ್ಪಗೆ ಬಿಜೆಪಿ ಕಂಡರೆ ದ್ವೇಷ ಮತ್ತು ಕೆಜೆಪಿ ಕಂಡರೆ ಪ್ರೀತಿ ಎಂಬಂತಾಗಿದೆ. ತುಮಕೂರಿನಲ್ಲಿ ನಡೆಯುತ್ತಿರುವುದು ಪರಿವರ್ತನಾ ಯಾತ್ರೆಯಲ್ಲ, ಕೆಜೆಪಿ ಯಾತ್ರೆ ಎಂದು ಯಡಿಯೂರಪ್ಪ ವಿರುದ್ಧ ಶಿವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌