ಎನ್‌ಕೌಂಟರ್ ಕೇಸ್‌ನಲ್ಲಿ ಕೆಂಪಯ್ಯ ಅಳಿಯಗೆ ರಿಲೀಫ್!

Published : Sep 11, 2018, 12:50 PM ISTUpdated : Sep 19, 2018, 09:22 AM IST
ಎನ್‌ಕೌಂಟರ್ ಕೇಸ್‌ನಲ್ಲಿ ಕೆಂಪಯ್ಯ ಅಳಿಯಗೆ ರಿಲೀಫ್!

ಸಾರಾಂಶ

ಸೊಹ್ರಾಬುದ್ದೀನ್ ಕೇಸ್ : ಕೆಂಪಯ್ಯ ಅಳಿಯ ಸೇರಿ ನಾಲ್ವರ ಖುಲಾಸೆಗೆ ಹೈಕೋರ್ಟ್‌ ಅಸ್ತು | ವಂಜಾರಾ, ದಿನೇಶ್ ಕುಮಾರ್ ಮತ್ತಿತರರನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸೊಹ್ರಾಬುದ್ದೀನ್‌ರ ಸಹೋದರ ರುಬಾವುದ್ದೀನ್‌ ಮೇಲ್ಮನವಿ ಸಲ್ಲಿಸಿದ್ದರು | 

ಮುಂಬೈ (ಸೆ. 11): ಶಂಕಿತ ಗ್ಯಾಂಗ್‌ಸ್ಟರ್‌ ಸೊಹ್ರಾಬುದ್ದೀನ್‌ ಶೇಖ್‌ ಎನ್‌ಕೌಂಟರ್‌ ಪ್ರಕರಣದ ವಿಚಾರಣೆಯಿಂದ ಗುಜರಾತ್‌ನ ಮಾಜಿ ಎಟಿಎಸ್‌ ಮುಖ್ಯಸ್ಥ ಡಿ.ಜಿ. ವಂಜಾರಾ, ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಕೆಂಪಯ್ಯ ಅವರ ಅಳಿಯನೂ ಆದ ರಾಜಸ್ಥಾನ ಐಪಿಎಸ್‌ ಅಧಿಕಾರಿ ಎಂ.ಎನ್‌. ದಿನೇಶ್‌ ಹಾಗೂ ಇತರರನ್ನು ಕೈಬಿಟ್ಟಿದ್ದ ವಿಚಾರಣಾಧೀನ ಕೋರ್ಟ್‌ ತೀರ್ಪನ್ನು ಬಾಂಬೆ ಹೈಕೋರ್ಟ್‌ ಎತ್ತಿಹಿಡಿದಿದೆ. ಪ್ರಕರಣದ ಮೇಲ್ಮನವಿಯು ಅನರ್ಹ ಎಂದು ಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಸೊಹ್ರಾಬುದ್ದೀನ್‌ ಮತ್ತು ಆತನ ಪತ್ನಿ ಕೌಸರ್‌ ಬೀ, ಸಹಾಯಕ ತುಳಸಿರಾಮ್‌ ಪ್ರಜಾಪತಿ ಎನ್‌ಕೌಂಟರ್‌ಗೆ ಸಂಬಂಧಿಸಿದ ಪ್ರಕರಣ ಇದು.

ಪ್ರಕರಣದ ಸಹ ಆರೋಪಿಗಳಾದ ಗುಜರಾತ್‌ ಪೊಲೀಸ್‌ನ ಅಧಿಕಾರಿ ವಿಪುಲ್‌ ಅಗರ್‌ವಾಲ್‌ ಅವರನ್ನೂ ಪ್ರಕರಣದಿಂದ ಕೈಬಿಡಲು ನ್ಯಾ.ಎ.ಎಂ. ಬದರ್‌ ನ್ಯಾಯಪೀಠ ಸಮ್ಮತಿಸಿದೆ. ಅಗರ್ವಾಲ್‌ರ ಅರ್ಜಿ ಈ ಹಿಂದೆ ವಿಚಾರಣಾಧೀನ ಕೋರ್ಟ್‌ನಲ್ಲಿ ತಿರಸ್ಕರಿಸಲ್ಪಟ್ಟಿತ್ತು, ಹೀಗಾಗಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ವಂಜಾರಾ ಮತ್ತಿತರರನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸೊಹ್ರಾಬುದ್ದೀನ್‌ರ ಸಹೋದರ ರುಬಾವುದ್ದೀನ್‌ ಮೇಲ್ಮನವಿ ಸಲ್ಲಿಸಿದ್ದರು. ಗುಜರಾತ್‌ ಪೊಲೀಸ್‌ ಇಲಾಖೆಯ ಡಿ.ಜಿ. ವಂಜಾರಾ, ರಾಜ್‌ಕುಮಾರ್‌ ಪಾಂಡ್ಯನ್‌, ಎನ್‌.ಕೆ. ಅಮೀನ್‌ ಮತ್ತು ರಾಜಸ್ಥಾನ ಪೊಲೀಸ್‌ನ ದಿನೇಶ್‌ ಎಂ.ಎನ್‌., ದಲ್ಪತ್‌ ಸಿಂಗ್‌ ರಾಥೋಡ್‌ರನ್ನು ಪ್ರಕರಣದಿಂದ ಕೈಬಿಟ್ಟಿರುವುದನ್ನು ಕೋರ್ಟ್‌ ಎತ್ತಿಹಿಡಿದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!