‘ಶಾಸಕ ಸೇಲಾದ’ ಸಮಾವೇಶ ನಡೆಸಲು ಕಾಂಗ್ರೆಸ್‌ ತಯಾರಿ!

Published : Aug 06, 2019, 10:11 AM ISTUpdated : Aug 06, 2019, 11:58 AM IST
‘ಶಾಸಕ ಸೇಲಾದ’ ಸಮಾವೇಶ ನಡೆಸಲು ಕಾಂಗ್ರೆಸ್‌ ತಯಾರಿ!

ಸಾರಾಂಶ

‘ಶಾಸಕ ಸೇಲಾದ’ ಸಮಾವೇಶ ನಡೆಸಲು ಕಾಂಗ್ರೆಸ್‌ ತಯಾರಿ| ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ರಾರ‍ಯಲಿ ನಡೆಸಲು ನಿರ್ಧಾರ| ಎಂಟಿಬಿ ಕ್ಷೇತ್ರ ಹೊಸಕೋಟೆಯಲ್ಲಿ ಮೊದಲ ಸಮಾವೇಶ

ಬೆಂಗಳೂರು[ಆ.06]: ಪಕ್ಷಕ್ಕೆ ಕೈಕೊಟ್ಟು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಪಾಠ ಕಲಿಸಲು ಸಜ್ಜಾಗಿರುವ ಕಾಂಗ್ರೆಸ್‌ ನಾಯಕತ್ವ, ಎಲ್ಲಾ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ‘ಶಾಸಕ ಸೇಲಾದ’ (ಮಾರಾಟವಾದರು) ಎಂಬ ಹೆಸರಿನಲ್ಲಿ ಸಮಾವೇಶಗಳನ್ನು ಆಯೋಜಿಸಲು ತೀರ್ಮಾನಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್‌ನ ಎಲ್ಲಾ ಪ್ರಮುಖ ನಾಯಕರು ಪಾಲ್ಗೊಳ್ಳಲಿರುವ ಈ ಪ್ರತಿಭಟನಾ ಸಮಾವೇಶಗಳು ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಎಲ್ಲಾ ಅತೃಪ್ತ ಶಾಸಕರ ಕ್ಷೇತ್ರಗಳಲ್ಲಿ ನಡೆಯಲಿದ್ದು, ಮೊದಲ ಸಮಾವೇಶ ಆ.8ರಂದು ಹೊಸಕೋಟೆ (ಅನರ್ಹರಾದ ಎಂ.ಟಿ.ಬಿ. ನಾಗರಾಜ್‌ ಅವರ ಕ್ಷೇತ್ರ)ಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷಕ್ಕೆ ಕೈಕೊಟ್ಟಅನರ್ಹ ಶಾಸಕರು ಬಿಜೆಪಿಗೆ ಸೇಲಾದರು ಎಂದು ಬಿಂಬಿಸುವುದು ಹಾಗೂ ಈ ಅನರ್ಹರ ಅಧಿಕಾರದ ಲಾಲಸೆಯಿಂದಾಗಿ ಉಪ ಚುನಾವಣೆ ಎದುರಾಗಿದ್ದು, ಇದರಿಂದ ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಸಾರ್ವಜನಿಕರಿಗೆ ಮನದಟ್ಟು ಮಾಡಿಕೊಡುವ ಉದ್ದೇಶ ಈ ಸಮಾವೇಶಗಳ ಆಯೋಜನೆಯ ಹಿಂದೆ ಇದೆ.

ಈ ಸಮಾವೇಶಗಳನ್ನು ಯಶಸ್ವಿಗೊಳಿಸುವ ಹೊಣೆಯನ್ನು ಪ್ರತಿ ಕ್ಷೇತ್ರದ ವೀಕ್ಷಕರಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ