ಅತೃಪ್ತರಿಗೆ ಡಿ.ಕೆ ಶಿವಕುಮಾರ್ ಹೊಸ ಭರವಸೆ

Published : Jun 11, 2018, 10:40 AM IST
ಅತೃಪ್ತರಿಗೆ ಡಿ.ಕೆ ಶಿವಕುಮಾರ್ ಹೊಸ ಭರವಸೆ

ಸಾರಾಂಶ

ತಾಳ್ಮೆ, ಸಂಯಮದಿಂದ ಕಾಯ್ದರೆ ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಅವಕಾಶಗಳು ಸಿಗಲಿವೆ ಎಂದು  ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 

ಬೆಂಗಳೂರು: ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗಲಿಲ್ಲ ಎಂದ ಮಾತ್ರಕ್ಕೆ ಅಧಿಕಾರದ ಎಲ್ಲ ಬಾಗಿಲುಗಳು ಮುಚ್ಚಿ ಹೋಗುವು ದಿಲ್ಲ. ತಾಳ್ಮೆ, ಸಂಯಮದಿಂದ ಕಾಯ್ದರೆ ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಅವಕಾಶಗಳು ಸಿಗಲಿವೆ ಎಂದು  ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಅತೃಪ್ತ ಶಾಸಕರ ವಿಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಹಿಂದೆ (ಸಿದ್ದರಾಮಯ್ಯ ಆಡಳಿತದಲ್ಲಿ) ನಾನೂ ಕೂಡ 7 ತಿಂಗಳು ಅಧಿಕಾರ ಇಲ್ಲದಿದ್ದರೂ ತಡೆದುಕೊಂಡು ಇರಲಿಲ್ಲವಾ? ಪರಮೇಶ್ವರ್ ಅವರನ್ನೂ ಸುಮ್ಮನೆ ಕೂರಿಸಿರಲಿಲ್ಲವಾ? ಧರ್ಮ ಸಿಂಗ್ ಕಾಲದಲ್ಲೂ ನನ್ನನ್ನು ಸುಮ್ಮನೆ ಕೂರಿಸಿದ್ದರು. ಆಗ ನಾವು ತಾಳ್ಮೆಯಿಂದ ಇರಲಿಲ್ಲವಾ? ಮೊದಲ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದ ಮಾತ್ರಕ್ಕೆ ಅಧಿಕಾರದ ಬಾಗಿಲು ಮುಚ್ಚಿದಂತಲ್ಲ, ತಾಳ್ಮೆಯಿಂದ ಕಾಯ್ದರೆ ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಅವಕಾಶಗಳು ಸಿಗಲಿವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ